ಕಾರಿನಲ್ಲಿದ್ದ ಉಳಿದ ಆರು ಮಂದಿ ಪಾರಾಗಿದ್ದಾರೆ. ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ವಿಜಯವಾಡದ ಬಾನು ಅವರು ಇನ್ಪೊಸಿಸ್ನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಕುಟುಂಬವು ಬೆಂಗಳೂರಿಗೆ ಬಂದಿತ್ತು. ಅವರಿಗೆ ಬೆಂಗಳೂರಿನ ವಿವಿಧ ಸ್ಥಳಗಳನ್ನು ತೋರಿಸಲು ಕಾರಿನಲ್ಲಿ ತೆರಳಿದ್ದರು. ಆಗ ಈ ಅನಾಹುತ ಸಂಭವಿಸಿದೆ.
ಸೇಂಟ್ ಮಾರ್ಥಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮೃತ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದರು.