<p><strong>ಬೆಂಗಳೂರು:</strong> ‘ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ವೆಂಕಟೇಶ್ (40) ಎಂಬುವರನ್ನು ಕೊಲೆ ಮಾಡಲಾಗಿದ್ದು, ಆರೋಪಿ ಸಿದ್ದರಾಜುನನ್ನು (42) ಬಂಧಿಸಲಾಗಿದೆ’ ಎಂದು ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ವೆಂಕಟೇಶ್, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಟೈಲರ್ ಕೆಲಸ ಮಾಡುತ್ತಿದ್ದರು. ಆರೋಪಿ ಸಿದ್ದರಾಜು, ಬಾರ್ ಆ್ಯಂಡ್ ರೆಸ್ಟೋರೆಂಟ್ ಕೆಲಸಗಾರ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಸಿದ್ದರಾಜು, ಪತ್ನಿ ಜೊತೆ ವಾಸವಿದ್ದ. ದಂಪತಿ ನಡುವೆ ಜಗಳವಿತ್ತು. ಸಿದ್ದರಾಜು ಪತ್ನಿಯನ್ನು ಪರಿಚಯ ಮಾಡಿಕೊಂಡಿದ್ದ ವೆಂಕಟೇಶ್, ಸಲುಗೆ ಬೆಳೆಸಿದ್ದ. ಡಿ. 2ರಂದು ವೆಂಕಟೇಶ್ ಹಾಗೂ ಸಿದ್ದರಾಜು ಪತ್ನಿ ಪರಸ್ಪರ ಮಾತನಾಡುತ್ತ ರಸ್ತೆಯಲ್ಲಿ ನಿಂತಿದ್ದರು. ಅದನ್ನು ಗಮನಿಸಿದ್ದ ಸಿದ್ದರಾಜು ಸ್ಥಳಕ್ಕೆ ಹೋಗಿದ್ದ.’</p>.<p>‘ವೆಂಕಟೇಶ್ ಅವರಿಗೆ ಚಪ್ಪಲಿಯಿಂದ ಹೊಡೆದಿದ್ದ ಸಿದ್ದರಾಜು, ತಳ್ಳಿ ಬೀಳಿಸಿದ್ದ. ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿದ್ದ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ವೆಂಕಟೇಶ್ (40) ಎಂಬುವರನ್ನು ಕೊಲೆ ಮಾಡಲಾಗಿದ್ದು, ಆರೋಪಿ ಸಿದ್ದರಾಜುನನ್ನು (42) ಬಂಧಿಸಲಾಗಿದೆ’ ಎಂದು ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ವೆಂಕಟೇಶ್, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಟೈಲರ್ ಕೆಲಸ ಮಾಡುತ್ತಿದ್ದರು. ಆರೋಪಿ ಸಿದ್ದರಾಜು, ಬಾರ್ ಆ್ಯಂಡ್ ರೆಸ್ಟೋರೆಂಟ್ ಕೆಲಸಗಾರ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಸಿದ್ದರಾಜು, ಪತ್ನಿ ಜೊತೆ ವಾಸವಿದ್ದ. ದಂಪತಿ ನಡುವೆ ಜಗಳವಿತ್ತು. ಸಿದ್ದರಾಜು ಪತ್ನಿಯನ್ನು ಪರಿಚಯ ಮಾಡಿಕೊಂಡಿದ್ದ ವೆಂಕಟೇಶ್, ಸಲುಗೆ ಬೆಳೆಸಿದ್ದ. ಡಿ. 2ರಂದು ವೆಂಕಟೇಶ್ ಹಾಗೂ ಸಿದ್ದರಾಜು ಪತ್ನಿ ಪರಸ್ಪರ ಮಾತನಾಡುತ್ತ ರಸ್ತೆಯಲ್ಲಿ ನಿಂತಿದ್ದರು. ಅದನ್ನು ಗಮನಿಸಿದ್ದ ಸಿದ್ದರಾಜು ಸ್ಥಳಕ್ಕೆ ಹೋಗಿದ್ದ.’</p>.<p>‘ವೆಂಕಟೇಶ್ ಅವರಿಗೆ ಚಪ್ಪಲಿಯಿಂದ ಹೊಡೆದಿದ್ದ ಸಿದ್ದರಾಜು, ತಳ್ಳಿ ಬೀಳಿಸಿದ್ದ. ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿದ್ದ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>