<p><strong>ಬೆಂಗಳೂರು:</strong>ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿಚಾರಣೆ ಆರಂಭಿಸಲಾಯಿತು.</p>.<p>ಜಿಲ್ಲೆಯ ಮ್ಯಾಜಿಸ್ಟ್ರೇಟ್ ಆದ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ವಿಚಾರಣೆ ನಡೆಸಿದರು. ಈ ವೇಳೆ 30 ಮಂದಿ ತಮ್ಮ ಅಹವಾಲು ಸಲ್ಲಿಸಿದರು.</p>.<p>ಗಲಭೆಯಲ್ಲಿ ತಮ್ಮ ವಾಹನ ಸುಟ್ಟುಹೋಗಿದೆ ಎಂದು ಕೆಲವರು ದೂರಿದರೆ, ಪೊಲೀಸರು ತಮ್ಮವರನ್ನು ವಿನಾಕಾರಣ ಬಂಧಿಸಿದ್ದಾರೆ, ಸಂಬಂಧಿಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಉಳಿದವರು ಆರೋಪಿಸಿದರು.</p>.<p>ಹೇಳಿಕೆಗಳನ್ನು ಅಫಿಡವಿಟ್ ಮೂಲಕ ಸೆ.8ರೊಳಗೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದರು ಮತ್ತು ಮನವಿದಾರರು ಅಂದು ಖುದ್ದು ಹಾಜರಿರಬೇಕು ಎಂದೂ ಸೂಚಿಸಿದರು. ಸೆ.8ಕ್ಕೆ ವಿಚಾರಣೆ ಮುಂದೂಡಲಾಯಿತು.</p>.<p>ಜಿಲ್ಲಾ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಿ.ಎಸ್. ರೇವಣಕರ್, ಉಪವಿಭಾಗಾಧಿಕಾರಿ ಮತ್ತಿತರರು ಕಲಾಪದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿಚಾರಣೆ ಆರಂಭಿಸಲಾಯಿತು.</p>.<p>ಜಿಲ್ಲೆಯ ಮ್ಯಾಜಿಸ್ಟ್ರೇಟ್ ಆದ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ವಿಚಾರಣೆ ನಡೆಸಿದರು. ಈ ವೇಳೆ 30 ಮಂದಿ ತಮ್ಮ ಅಹವಾಲು ಸಲ್ಲಿಸಿದರು.</p>.<p>ಗಲಭೆಯಲ್ಲಿ ತಮ್ಮ ವಾಹನ ಸುಟ್ಟುಹೋಗಿದೆ ಎಂದು ಕೆಲವರು ದೂರಿದರೆ, ಪೊಲೀಸರು ತಮ್ಮವರನ್ನು ವಿನಾಕಾರಣ ಬಂಧಿಸಿದ್ದಾರೆ, ಸಂಬಂಧಿಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಉಳಿದವರು ಆರೋಪಿಸಿದರು.</p>.<p>ಹೇಳಿಕೆಗಳನ್ನು ಅಫಿಡವಿಟ್ ಮೂಲಕ ಸೆ.8ರೊಳಗೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದರು ಮತ್ತು ಮನವಿದಾರರು ಅಂದು ಖುದ್ದು ಹಾಜರಿರಬೇಕು ಎಂದೂ ಸೂಚಿಸಿದರು. ಸೆ.8ಕ್ಕೆ ವಿಚಾರಣೆ ಮುಂದೂಡಲಾಯಿತು.</p>.<p>ಜಿಲ್ಲಾ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಿ.ಎಸ್. ರೇವಣಕರ್, ಉಪವಿಭಾಗಾಧಿಕಾರಿ ಮತ್ತಿತರರು ಕಲಾಪದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>