<p><strong>ಬೆಂಗಳೂರು:</strong> ನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಪುಲಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ, ಜೀವನಹಳ್ಳಿ ನಿವಾಸಿ ನವೀನ್ ಕುಮಾರ್ (47) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ಹೇಳಿದರು.</p>.<p>ಖಾಸಗಿ ಕಂಪನಿ ಉದ್ಯೋಗಿಯಾಗಿರುವ ನವೀನ್ ಕುಮಾರ್, ಐಟಿಸಿ ಸಾಫ್ಟ್ವೇರ್ ಕಂಪನಿ ರಸ್ತೆಯಿಂದ ದೊಡ್ಡಬಾಣಸವಾಡಿ ಕಡೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಚಾಲಕ ಏಕಾಏಕಿ ಬಲಕ್ಕೆ ಬಂದು ಡಿಕ್ಕಿ ಹೊಡೆದಿದ್ದಾನೆ. ನವೀನ್ ಕುಮಾರ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು. <br><br>ಮತ್ತೊಂದು ಪ್ರಕರಣದಲ್ಲಿ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರ, ಕೊಡಿಗೇಹಳ್ಳಿ ಬಾಲಾಜಿ ಲೇಔಟ್ ನಿವಾಸಿ ಸಂದೀಪ್ (42) ಮೃತಪಟ್ಟಿದ್ದಾರೆ. ಸವಾರ ಹರಿಶ್ ಕುಮಾರ್ ಗಾಯಗೊಂಡಿದ್ದಾರೆ.</p>.<p>ಭಾನುವಾರ ರಾತ್ರಿ ಸುಮಾರು 9.30ಕ್ಕೆ ಬೆಂಗಳೂರು-ಬಳ್ಳಾರಿ ಹೆದ್ದಾರಿಯ ಜಕ್ಕೂರು ಕ್ರಾಸ್ ಸಮೀಪದ ಉದಯ ಡಾಬಾ ಬಳಿ ಈ ಘಟನೆ ನಡೆದಿದೆ. ಸಂದೀಪ್ ವೃತ್ತಿಯಲ್ಲಿ ಕ್ಯಾಬ್ ಚಾಲಕ. ಹರೀಶ್ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ. ಭಾನುವಾರ ಸಂಜೆ ನಿವೇಶನ ನೋಡಿಕೊಂಡು ಬರಲು ಇಬ್ಬರು ದ್ವಿಚಕ್ರ ವಾಹನದಲ್ಲಿ ಹೋಗಿದ್ದರು. ರಾತ್ರಿ ಮನೆಗೆ ವಾಪಸ್ ಬರುವಾಗ ಬೆಂಗಳೂರು-ಬಳ್ಳಾರಿ ಹೆದ್ದಾರಿ ಜಕ್ಕೂರು ಕ್ರಾಸ್ ಬಳಿಯ ಕಾರು ಡಿಕ್ಕಿ ಹೊಡೆದಿದೆ.</p>.<p>ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಸಂದೀಪ್ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಸೋಮವಾರ ಮುಂಜಾನೆ ಮೃತಪಟ್ಟರು.</p>.<p>‘ಅಪಘಾತದ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಕಾರು ಪತ್ತೆಗೆ ಘಟನಾ ಸ್ಥಳದ ಸುತ್ತಮುತ್ತಲ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಪುಲಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ, ಜೀವನಹಳ್ಳಿ ನಿವಾಸಿ ನವೀನ್ ಕುಮಾರ್ (47) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ಹೇಳಿದರು.</p>.<p>ಖಾಸಗಿ ಕಂಪನಿ ಉದ್ಯೋಗಿಯಾಗಿರುವ ನವೀನ್ ಕುಮಾರ್, ಐಟಿಸಿ ಸಾಫ್ಟ್ವೇರ್ ಕಂಪನಿ ರಸ್ತೆಯಿಂದ ದೊಡ್ಡಬಾಣಸವಾಡಿ ಕಡೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಚಾಲಕ ಏಕಾಏಕಿ ಬಲಕ್ಕೆ ಬಂದು ಡಿಕ್ಕಿ ಹೊಡೆದಿದ್ದಾನೆ. ನವೀನ್ ಕುಮಾರ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು. <br><br>ಮತ್ತೊಂದು ಪ್ರಕರಣದಲ್ಲಿ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರ, ಕೊಡಿಗೇಹಳ್ಳಿ ಬಾಲಾಜಿ ಲೇಔಟ್ ನಿವಾಸಿ ಸಂದೀಪ್ (42) ಮೃತಪಟ್ಟಿದ್ದಾರೆ. ಸವಾರ ಹರಿಶ್ ಕುಮಾರ್ ಗಾಯಗೊಂಡಿದ್ದಾರೆ.</p>.<p>ಭಾನುವಾರ ರಾತ್ರಿ ಸುಮಾರು 9.30ಕ್ಕೆ ಬೆಂಗಳೂರು-ಬಳ್ಳಾರಿ ಹೆದ್ದಾರಿಯ ಜಕ್ಕೂರು ಕ್ರಾಸ್ ಸಮೀಪದ ಉದಯ ಡಾಬಾ ಬಳಿ ಈ ಘಟನೆ ನಡೆದಿದೆ. ಸಂದೀಪ್ ವೃತ್ತಿಯಲ್ಲಿ ಕ್ಯಾಬ್ ಚಾಲಕ. ಹರೀಶ್ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ. ಭಾನುವಾರ ಸಂಜೆ ನಿವೇಶನ ನೋಡಿಕೊಂಡು ಬರಲು ಇಬ್ಬರು ದ್ವಿಚಕ್ರ ವಾಹನದಲ್ಲಿ ಹೋಗಿದ್ದರು. ರಾತ್ರಿ ಮನೆಗೆ ವಾಪಸ್ ಬರುವಾಗ ಬೆಂಗಳೂರು-ಬಳ್ಳಾರಿ ಹೆದ್ದಾರಿ ಜಕ್ಕೂರು ಕ್ರಾಸ್ ಬಳಿಯ ಕಾರು ಡಿಕ್ಕಿ ಹೊಡೆದಿದೆ.</p>.<p>ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಸಂದೀಪ್ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಸೋಮವಾರ ಮುಂಜಾನೆ ಮೃತಪಟ್ಟರು.</p>.<p>‘ಅಪಘಾತದ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಕಾರು ಪತ್ತೆಗೆ ಘಟನಾ ಸ್ಥಳದ ಸುತ್ತಮುತ್ತಲ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>