ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರಿಗೆ ತಲಾ ₹ 5000 ನೀಡಿದ ಆರ್.ವಿ.ವಿದ್ಯಾಸಂಸ್ಥೆ

Last Updated 12 ಮೇ 2020, 8:48 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಪರಿಸ್ಥಿತಿಯಲ್ಲೂ ಜಯನಗರ (153)ವಾರ್ಡ್‌ನ ಸ್ವಚ್ಛತೆ ಕಾಪಾಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವ ಎಲ್ಲ ಪೌರ ಕಾರ್ಮಿಕರಿಗೂ ಆರ್.ವಿ.ವಿದ್ಯಾಸಂಸ್ಥೆಯಿಂದ ತಲಾ ₹5000 ಡಿ.ಡಿಯನ್ನು ಮಂಗಳವಾರ ವಿತರಿಸಲಾಯಿತು.

ಜಯನಗರ ವಾರ್ಡ್ ಪಾಲಿಕೆ ಸದಸ್ಯೆ ಹಾಗೂ ನಿಕಟಪೂರ್ವ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಡಿಡಿಗಳನ್ನು ಪೌರ ಕಾರ್ಮಿಕರಿಗೆ ಹಸ್ತಾಂತರಿಸಿದರು.

ಕಾರ್ಯನಿರ್ವಹಿಸುತ್ತಿರುವ ಒಟ್ಟು 126 ಪೌರ ಕಾರ್ಮಿಕರಿಗೂ ಆರ್ಥಿಕ ನೆರವು ನೀಡಲಾಗಿದೆ. ಆರ್.ವಿ.ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿ , ಕಾರ್ಯದರ್ಶಿ ಎವಿಎಸ್ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT