ಬೆಂಗಳೂರು: ಕೊರೊನಾ ಪರಿಸ್ಥಿತಿಯಲ್ಲೂ ಜಯನಗರ (153)ವಾರ್ಡ್ನ ಸ್ವಚ್ಛತೆ ಕಾಪಾಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವ ಎಲ್ಲ ಪೌರ ಕಾರ್ಮಿಕರಿಗೂ ಆರ್.ವಿ.ವಿದ್ಯಾಸಂಸ್ಥೆಯಿಂದ ತಲಾ ₹5000 ಡಿ.ಡಿಯನ್ನು ಮಂಗಳವಾರ ವಿತರಿಸಲಾಯಿತು.
ಜಯನಗರ ವಾರ್ಡ್ ಪಾಲಿಕೆ ಸದಸ್ಯೆ ಹಾಗೂ ನಿಕಟಪೂರ್ವ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಡಿಡಿಗಳನ್ನು ಪೌರ ಕಾರ್ಮಿಕರಿಗೆ ಹಸ್ತಾಂತರಿಸಿದರು.
ಕಾರ್ಯನಿರ್ವಹಿಸುತ್ತಿರುವ ಒಟ್ಟು 126 ಪೌರ ಕಾರ್ಮಿಕರಿಗೂ ಆರ್ಥಿಕ ನೆರವು ನೀಡಲಾಗಿದೆ. ಆರ್.ವಿ.ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿ , ಕಾರ್ಯದರ್ಶಿ ಎವಿಎಸ್ ಮೂರ್ತಿ ಇದ್ದರು.