<p><strong>ಬೆಂಗಳೂರು</strong>: ನಗರದಲ್ಲಿ ವಾಣಿಜ್ಯ ಮಳಿಗೆಗಳ ಮುಂದೆ ಒಂದಕ್ಕಿಂತ ಹೆಚ್ಚು ಜಾಹೀರಾತು ಫಲಕ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ.</p>.<p>ಒಂದಕ್ಕಿಂತ ಹೆಚ್ಚಿನ ಫಲಕಗಳನ್ನು ಅಳವಡಿಸಬೇಕಾದರೆ ಅದಕ್ಕೆ ಜಾಹೀರಾತು ನೀತಿಯಂತೆ ಅನುಮತಿ ಪಡೆಯಬೇಕಾಗುತ್ತದೆ.</p>.<p>‘ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಹೊಸದಾಗಿ ಜಾರಿಗೆ ತಂದಿರುವ ಜಾಹೀರಾತು ನಿಯಮಾವಳಿಯಂತೆ ವಾಣಿಜ್ಯ ಮಳಿಗೆಯವರು ಒಂದಕ್ಕಿಂತ ಹೆಚ್ಚಿನ ಫಲಕ ಅಳವಡಿಸುವಂತಿಲ್ಲ. ಅನುಮತಿ ಪಡೆಯದೇ ಅಳವಡಿಸುವ ಎಲ್ಲಾ ಜಾಹೀರಾತು ಫಲಕಗಳು ಅನಧಿಕೃತವಾಗುತ್ತವೆ. ಹೀಗಾಗಿ, ವಾಣಿಜ್ಯ ಮಳಿಗೆ ಮಾಲೀಕರು ತಾವೇ ಎಲ್ಲಾ ರೀತಿಯ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವು ಮಾಡಬೇಕು’ ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಸೂಚಿಸಿದರು.</p>.<p>ಕೃಷ್ಣರಾಜಪುರ ವಲಯ ವ್ಯಾಪ್ತಿಯ ಹಳೆ ಮದ್ರಾಸ್ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿನ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಲಾಗಿರುವ ಅನಧಿಕೃತ ಜಾಹೀರಾತು ಹೋರ್ಡಿಂಗ್ ಹಾಗೂ ಎಲ್ಇಡಿ ಜಾಹೀರಾತಿನ 17 ಫಲಕಗಳನ್ನು ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ ತೆರವು ಮಾಡಲಾಯಿತು. ನಗರ ಪಾಲಿಕೆಯ ಎಂಜಿನಿಯರಿಂಗ್, ಕಂದಾಯ, ವಿದ್ಯುತ್ ಮತ್ತು ಆರೋಗ್ಯ ಇಲಾಖೆಯ ತಂಡವು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿತು ಎಂದು ಮಾಹಿತಿ ನೀಡಿದರು.</p>.<p>ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾತ್ರಿ 10ರಿಂದ ಬೆಳಗಿನ ಜಾವ 4ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು ಎಂದರು.</p>.<p>ನಗರದ ಸೌಂದರ್ಯ, ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಜಾಹೀರಾತುಗಳ ವಿರುದ್ಧ ಪ್ರತಿ ವಾರ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗುವುದು. ಅನುಮತಿ ಪಡೆಯದೇ ಜಾಹೀರಾತು ಫಲಕಗಳನ್ನು ಅಳವಡಿಸುವುದು ಕಾನೂನುಬಾಹಿರವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಬೆಂಗಳೂರು ಪೂರ್ವ ನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ತೆರವು ಕಾರ್ಯಾಚರಣೆ ಜೊತೆಗೆ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡನಾತ್ಮಕ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದರು.</p>.<h2>ಜಯನಗರಕ್ಕೆ ಸಮಗ್ರ ಪಾರ್ಕಿಂಗ್ ಕ್ರಿಯಾ ಯೋಜನೆ</h2><p>ಜಯನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಸಮಗ್ರ ಪಾರ್ಕಿಂಗ್ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ ಪಾಲಿಕೆಯ ಸಂಚಾರ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಜಯನಗರದಲ್ಲಿ ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರುವುದು, ಅವಶ್ಯ ಇರುವ ಕಡೆ ರಸ್ತೆ<br>ಉಬ್ಬುಗಳ ನಿರ್ಮಾಣ, ಪಾದಚಾರಿಗಳ ಸುರಕ್ಷತೆಗೆ ಒತ್ತು, ಲೇನ್ ಮಾರ್ಕಿಂಗ್ ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಲು ನಿರ್ಧರಿಸಲಾಯಿತು.</p><p>ಬಜೆಟ್ ಅನುದಾನ ಅಥವಾ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಜಯನಗರದಲ್ಲಿ<br>ಬಹುಮಹಡಿ ಪಾರ್ಕಿಂಗ್ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತದೆ. ಸಂಚಾರಕ್ಕೆ ಅಡ್ಡಿಯಾಗದಂತೆ ಬೀದಿ ಬದಿ<br>ವ್ಯಾಪಾರಿಗಳಿಗೆ ‘ವ್ಯಾಪಾರ ವಲಯ’ ಮತ್ತು ‘ನಿಷೇಧಿತ ವ್ಯಾಪಾರ ವಲಯ’ಗಳನ್ನು ಗುರುತಿಸುವ ಜವಾಬ್ದಾರಿಯನ್ನು ಸಂಚಾರ ಪೊಲೀಸರಿಗೆ ವಹಿಸಲಾಯಿತು. ವೆಗಾ ಸಿಟಿ ಮಾಲ್, ಫೋರಂ ಮಾಲ್ ಮತ್ತು ಬನಶಂಕರಿ ಜಂಕ್ಷನ್ಗಳಲ್ಲಿ ಸ್ಕೈವಾಕ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಮೇಶ್ ಅವರು ತಿಳಿಸಿದರು.</p><p>ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಯನಗರದ ಸಿ.ಐ.ಎಂ.ಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪಾಲಿಕೆ ಅಧಿಕಾರಿ–ಸಿಬ್ಬಂದಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<h2>ನಿಷೇಧಿತ ಪ್ಯಾಸ್ಟಿಕ್ ಬಳಕೆ: ಮೆಟ್ರೊ ಕ್ಯಾಶ್ಗೆ ₹50 ಸಾವಿರ ದಂಡ</h2><p>ಸುಬ್ರಹ್ಮಣ್ಯ ನಗರದಲ್ಲಿರುವ ಮೆಟ್ರೊ ಕ್ಯಾಶ್ ಆ್ಯಂಡ್ ಕ್ಯಾರಿ ಇಂಡಿಯಾದಲ್ಲಿ ನಿಷೇಧಿಸಲಾಗಿರುವ ಪ್ಲಾಸ್ಟಿಕ್ ಬಳಕೆ– ಮಾರಾಟವನ್ನು ಪತ್ತೆ ಹಚ್ಚಿದ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸುಬ್ರಹ್ಮಣ್ಯ ನಗರ ವಿಭಾಗದ ಸಿಬ್ಬಂದಿ ₹50 ಸಾವಿರ ದಂಡ ವಿಧಿಸಿದ್ದಾರೆ.</p><p>ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಾಗೂ ಪರಿಸರ ಸುಸ್ಥಿರತೆ<br>ಯನ್ನು ಪ್ರಚಾರಗೊಳಿಸಲು ಬಿಎಸ್ಡಬ್ಲ್ಯುಎಂಎಲ್ ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ವಾಣಿಜ್ಯ ಮಳಿಗೆಗಳ ಮುಂದೆ ಒಂದಕ್ಕಿಂತ ಹೆಚ್ಚು ಜಾಹೀರಾತು ಫಲಕ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ.</p>.<p>ಒಂದಕ್ಕಿಂತ ಹೆಚ್ಚಿನ ಫಲಕಗಳನ್ನು ಅಳವಡಿಸಬೇಕಾದರೆ ಅದಕ್ಕೆ ಜಾಹೀರಾತು ನೀತಿಯಂತೆ ಅನುಮತಿ ಪಡೆಯಬೇಕಾಗುತ್ತದೆ.</p>.<p>‘ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಹೊಸದಾಗಿ ಜಾರಿಗೆ ತಂದಿರುವ ಜಾಹೀರಾತು ನಿಯಮಾವಳಿಯಂತೆ ವಾಣಿಜ್ಯ ಮಳಿಗೆಯವರು ಒಂದಕ್ಕಿಂತ ಹೆಚ್ಚಿನ ಫಲಕ ಅಳವಡಿಸುವಂತಿಲ್ಲ. ಅನುಮತಿ ಪಡೆಯದೇ ಅಳವಡಿಸುವ ಎಲ್ಲಾ ಜಾಹೀರಾತು ಫಲಕಗಳು ಅನಧಿಕೃತವಾಗುತ್ತವೆ. ಹೀಗಾಗಿ, ವಾಣಿಜ್ಯ ಮಳಿಗೆ ಮಾಲೀಕರು ತಾವೇ ಎಲ್ಲಾ ರೀತಿಯ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವು ಮಾಡಬೇಕು’ ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಸೂಚಿಸಿದರು.</p>.<p>ಕೃಷ್ಣರಾಜಪುರ ವಲಯ ವ್ಯಾಪ್ತಿಯ ಹಳೆ ಮದ್ರಾಸ್ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿನ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಲಾಗಿರುವ ಅನಧಿಕೃತ ಜಾಹೀರಾತು ಹೋರ್ಡಿಂಗ್ ಹಾಗೂ ಎಲ್ಇಡಿ ಜಾಹೀರಾತಿನ 17 ಫಲಕಗಳನ್ನು ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ ತೆರವು ಮಾಡಲಾಯಿತು. ನಗರ ಪಾಲಿಕೆಯ ಎಂಜಿನಿಯರಿಂಗ್, ಕಂದಾಯ, ವಿದ್ಯುತ್ ಮತ್ತು ಆರೋಗ್ಯ ಇಲಾಖೆಯ ತಂಡವು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿತು ಎಂದು ಮಾಹಿತಿ ನೀಡಿದರು.</p>.<p>ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾತ್ರಿ 10ರಿಂದ ಬೆಳಗಿನ ಜಾವ 4ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು ಎಂದರು.</p>.<p>ನಗರದ ಸೌಂದರ್ಯ, ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಜಾಹೀರಾತುಗಳ ವಿರುದ್ಧ ಪ್ರತಿ ವಾರ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗುವುದು. ಅನುಮತಿ ಪಡೆಯದೇ ಜಾಹೀರಾತು ಫಲಕಗಳನ್ನು ಅಳವಡಿಸುವುದು ಕಾನೂನುಬಾಹಿರವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಬೆಂಗಳೂರು ಪೂರ್ವ ನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ತೆರವು ಕಾರ್ಯಾಚರಣೆ ಜೊತೆಗೆ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡನಾತ್ಮಕ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದರು.</p>.<h2>ಜಯನಗರಕ್ಕೆ ಸಮಗ್ರ ಪಾರ್ಕಿಂಗ್ ಕ್ರಿಯಾ ಯೋಜನೆ</h2><p>ಜಯನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಸಮಗ್ರ ಪಾರ್ಕಿಂಗ್ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ ಪಾಲಿಕೆಯ ಸಂಚಾರ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಜಯನಗರದಲ್ಲಿ ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರುವುದು, ಅವಶ್ಯ ಇರುವ ಕಡೆ ರಸ್ತೆ<br>ಉಬ್ಬುಗಳ ನಿರ್ಮಾಣ, ಪಾದಚಾರಿಗಳ ಸುರಕ್ಷತೆಗೆ ಒತ್ತು, ಲೇನ್ ಮಾರ್ಕಿಂಗ್ ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಲು ನಿರ್ಧರಿಸಲಾಯಿತು.</p><p>ಬಜೆಟ್ ಅನುದಾನ ಅಥವಾ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಜಯನಗರದಲ್ಲಿ<br>ಬಹುಮಹಡಿ ಪಾರ್ಕಿಂಗ್ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತದೆ. ಸಂಚಾರಕ್ಕೆ ಅಡ್ಡಿಯಾಗದಂತೆ ಬೀದಿ ಬದಿ<br>ವ್ಯಾಪಾರಿಗಳಿಗೆ ‘ವ್ಯಾಪಾರ ವಲಯ’ ಮತ್ತು ‘ನಿಷೇಧಿತ ವ್ಯಾಪಾರ ವಲಯ’ಗಳನ್ನು ಗುರುತಿಸುವ ಜವಾಬ್ದಾರಿಯನ್ನು ಸಂಚಾರ ಪೊಲೀಸರಿಗೆ ವಹಿಸಲಾಯಿತು. ವೆಗಾ ಸಿಟಿ ಮಾಲ್, ಫೋರಂ ಮಾಲ್ ಮತ್ತು ಬನಶಂಕರಿ ಜಂಕ್ಷನ್ಗಳಲ್ಲಿ ಸ್ಕೈವಾಕ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಮೇಶ್ ಅವರು ತಿಳಿಸಿದರು.</p><p>ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಯನಗರದ ಸಿ.ಐ.ಎಂ.ಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪಾಲಿಕೆ ಅಧಿಕಾರಿ–ಸಿಬ್ಬಂದಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<h2>ನಿಷೇಧಿತ ಪ್ಯಾಸ್ಟಿಕ್ ಬಳಕೆ: ಮೆಟ್ರೊ ಕ್ಯಾಶ್ಗೆ ₹50 ಸಾವಿರ ದಂಡ</h2><p>ಸುಬ್ರಹ್ಮಣ್ಯ ನಗರದಲ್ಲಿರುವ ಮೆಟ್ರೊ ಕ್ಯಾಶ್ ಆ್ಯಂಡ್ ಕ್ಯಾರಿ ಇಂಡಿಯಾದಲ್ಲಿ ನಿಷೇಧಿಸಲಾಗಿರುವ ಪ್ಲಾಸ್ಟಿಕ್ ಬಳಕೆ– ಮಾರಾಟವನ್ನು ಪತ್ತೆ ಹಚ್ಚಿದ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸುಬ್ರಹ್ಮಣ್ಯ ನಗರ ವಿಭಾಗದ ಸಿಬ್ಬಂದಿ ₹50 ಸಾವಿರ ದಂಡ ವಿಧಿಸಿದ್ದಾರೆ.</p><p>ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಾಗೂ ಪರಿಸರ ಸುಸ್ಥಿರತೆ<br>ಯನ್ನು ಪ್ರಚಾರಗೊಳಿಸಲು ಬಿಎಸ್ಡಬ್ಲ್ಯುಎಂಎಲ್ ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>