<p><strong>ಬೆಂಗಳೂರು</strong>: ರಾಜ್ಯದಲ್ಲಿ ಸಂಶೋಧನೆಗೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹೂಡಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p><p>ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2023 ಉದ್ಘಾಟಿಸಿ ಮಾತನಾಡಿದ ಅವರು, 'ಮುಂದಿನ ಹಂತದ ಸಂಶೋಧನೆಯನ್ನು ನಮ್ಮ ಸರ್ಕಾರ ಉತ್ತೇಜಿಸಲಿದೆ. ಇದಕ್ಕಾಗಿ ಉದ್ದಿಮೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಲು ಆದ್ಯತೆ ನೀಡಲಾಗುವುದು. ಸರ್ಕಾರದ ನೀತಿಗಳಲ್ಲೂ ಅಗತ್ಯ ಬದಲಾವಣೆ ಮಾಡಲಾಗುವುದು' ಎಂದರು.</p><p>ಕರ್ನಾಟಕವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಈ ಕ್ಷೇತ್ರದ 5,500 ಕಂಪನಿಗಳು ರಾಜ್ಯದಲ್ಲಿವೆ. 750 ಬಹುರಾಷ್ಟ್ರೀಯ ಕಂಪನಿಗಳೂ ಇಲ್ಲಿವೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದಲ್ಲಿ 43 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಿಗಳನ್ನು ಹೊಂದಿದೆ ಎಂದು ಹೇಳಿದರು.</p><p>ರಾಜ್ಯ ಸರ್ಕಾರವು ಉದ್ಯಮಸ್ನೇಹಿ ವಾತಾವರಣ ನಿರ್ಮಾಣಕ್ಕೆ ಒತ್ತು ನೀಡುತ್ತಿದೆ. ಭೂ ಪರಿವರ್ತನೆಯ ಸರಳೀಕರಣ, ಏಕಗವಾಕ್ಷಿ ಮೂಲಕ ಅನುಮೋದನೆ ನೀಡಲಾಗುತ್ತಿದೆ. ಬೆಂಗಳೂರಿನ ಹೊರಗೆ ಹೂಡಿಕೆದಾರರಿಗೆ ವಿಶೇಷ ಉತ್ತೇಜನ ನೀಡುವ ಮೂಲಕ ಡಿಜಿಟಲ್ ಬೆಳವಣಿಗೆಯಲ್ಲಿನ ಅಸಮತೋಲನ ತಗ್ಗಿಸಲಾಗುತ್ತಿದೆ ಎಂದರು.</p><p>ದೇಶದಲ್ಲೇ ಮೊದಲು ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ರಾಜ್ಯ ಕರ್ನಾಟಕ. ಶೀಘ್ರದಲ್ಲಿ ಹೊಸ ಜೈವಿಕ ತಂತ್ರಜ್ಞಾನ ನೀತಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.</p><p>ಅನಿಮೇಷನ್ ವಿಷ್ಯುವಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿವೆ. ಈ ಕ್ಷೇತ್ರವನ್ನು ಉತ್ತೇಜಿಸುವುದಕ್ಕಾಗಿ ಎವಿಜಿಸಿ- ಎಕ್ಸ್ ಆರ್ ನೀತಿಯನ್ನೂ ಜಾರಿಗೊಳಿಸಲಾಗುವುದು ಎಂದರು.</p><p>ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 85,000 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಫ್ತು ಮಾಡುತ್ತಿದೆ. ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಸಂಶೋಧನೆಗೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹೂಡಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p><p>ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2023 ಉದ್ಘಾಟಿಸಿ ಮಾತನಾಡಿದ ಅವರು, 'ಮುಂದಿನ ಹಂತದ ಸಂಶೋಧನೆಯನ್ನು ನಮ್ಮ ಸರ್ಕಾರ ಉತ್ತೇಜಿಸಲಿದೆ. ಇದಕ್ಕಾಗಿ ಉದ್ದಿಮೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಲು ಆದ್ಯತೆ ನೀಡಲಾಗುವುದು. ಸರ್ಕಾರದ ನೀತಿಗಳಲ್ಲೂ ಅಗತ್ಯ ಬದಲಾವಣೆ ಮಾಡಲಾಗುವುದು' ಎಂದರು.</p><p>ಕರ್ನಾಟಕವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಈ ಕ್ಷೇತ್ರದ 5,500 ಕಂಪನಿಗಳು ರಾಜ್ಯದಲ್ಲಿವೆ. 750 ಬಹುರಾಷ್ಟ್ರೀಯ ಕಂಪನಿಗಳೂ ಇಲ್ಲಿವೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದಲ್ಲಿ 43 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಿಗಳನ್ನು ಹೊಂದಿದೆ ಎಂದು ಹೇಳಿದರು.</p><p>ರಾಜ್ಯ ಸರ್ಕಾರವು ಉದ್ಯಮಸ್ನೇಹಿ ವಾತಾವರಣ ನಿರ್ಮಾಣಕ್ಕೆ ಒತ್ತು ನೀಡುತ್ತಿದೆ. ಭೂ ಪರಿವರ್ತನೆಯ ಸರಳೀಕರಣ, ಏಕಗವಾಕ್ಷಿ ಮೂಲಕ ಅನುಮೋದನೆ ನೀಡಲಾಗುತ್ತಿದೆ. ಬೆಂಗಳೂರಿನ ಹೊರಗೆ ಹೂಡಿಕೆದಾರರಿಗೆ ವಿಶೇಷ ಉತ್ತೇಜನ ನೀಡುವ ಮೂಲಕ ಡಿಜಿಟಲ್ ಬೆಳವಣಿಗೆಯಲ್ಲಿನ ಅಸಮತೋಲನ ತಗ್ಗಿಸಲಾಗುತ್ತಿದೆ ಎಂದರು.</p><p>ದೇಶದಲ್ಲೇ ಮೊದಲು ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ರಾಜ್ಯ ಕರ್ನಾಟಕ. ಶೀಘ್ರದಲ್ಲಿ ಹೊಸ ಜೈವಿಕ ತಂತ್ರಜ್ಞಾನ ನೀತಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.</p><p>ಅನಿಮೇಷನ್ ವಿಷ್ಯುವಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿವೆ. ಈ ಕ್ಷೇತ್ರವನ್ನು ಉತ್ತೇಜಿಸುವುದಕ್ಕಾಗಿ ಎವಿಜಿಸಿ- ಎಕ್ಸ್ ಆರ್ ನೀತಿಯನ್ನೂ ಜಾರಿಗೊಳಿಸಲಾಗುವುದು ಎಂದರು.</p><p>ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 85,000 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಫ್ತು ಮಾಡುತ್ತಿದೆ. ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>