ಶನಿವಾರ, 16 ಆಗಸ್ಟ್ 2025
×
ADVERTISEMENT
ADVERTISEMENT

ಬೆಂಗಳೂರು | ಮತ್ತೆ ಕಾಡುತ್ತಿರುವ ಸಂಚಾರ ದಟ್ಟಣೆ: ವಾಹನ ಚಾಲಕರು ಹೈರಾಣು

Published : 15 ಆಗಸ್ಟ್ 2025, 23:30 IST
Last Updated : 15 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಕೆಟ್ಟು ನಿಂತ ವಾಹನಗಳಿಂದಲೂ ಅಡಚಣೆ:
ನಗರದಲ್ಲಿ ದಟ್ಟಣೆ ಸಮಸ್ಯೆಗೆ ನಾನಾ ಕಾರಣಗಳಿವೆ. ರಸ್ತೆಯ ಅಕ್ಕಪಕ್ಕದಲ್ಲಿ ಕೆಟ್ಟು ನಿಂತ ವಾಹನಗಳೂ ಕಾರಣವಾಗುತ್ತಿವೆ. ವರ್ಷಾನುಗಟ್ಟಲೇ ಈ ವಾಹನಗಳು ನಿಂತಲ್ಲೇ ಇರುತ್ತಿವೆ. ವಾಹನಗಳ ಮಾಲೀಕರು ಯಾರು ಎಂಬುದು ಗೊತ್ತಿಲ್ಲ. ಇದರಿಂದ ಹಲವು ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದರು.
‘ಸುಧಾರಣೆಗೆ ನಿರಂತರ ಪ್ರಯತ್ನ’
‘ನಗರದಲ್ಲಿ 1.40 ಕೋಟಿ ಜನಸಂಖ್ಯೆಯಿದ್ದು 1.20 ಕೋಟಿ ವಾಹನಗಳಿವೆ. ಆ ಪೈಕಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳದ್ದೇ ಸಿಂಹಪಾಲು. ತೀವ್ರ ಸಮಸ್ಯೆಗಳಿರುವ ಸ್ಥಳಗಳನ್ನು ಗುರುತಿಸಲಾಗಿದೆ. ಅಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನಿರಂತರ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಕಾರ್ತಿಕ್‌ ರೆಡ್ಡಿ ತಿಳಿಸಿದರು. ‘ಸಿಲ್ಕ್‌ಬೋರ್ಡ್‌ನಿಂದ ಸರ್ಜಾಪುರ ಹಾಗೂ ಹೆಬ್ಬಾಳ ರಸ್ತೆಯಲ್ಲಿ ಉಂಟಾಗುತ್ತಿರುವ ದಟ್ಟಣೆ ಸಮಸ್ಯೆ ಬಗೆಹರಿಸಲು ಬಿಬಿಎಂಪಿ, ಬೆಸ್ಕಾಂ ಹಾಗೂ ಜಲಮಂಡಳಿ ನೆರವು ಪಡೆಯಲಾಗುತ್ತಿದೆ. ಟೆಕ್‌ಪಾರ್ಕ್‌ ಬಳಿ ಪ್ರತಿನಿತ್ಯ ₹1.50 ಲಕ್ಷ ವಾಹನಗಳು ಸಂಚರಿಸುತ್ತಿವೆ. ಸುಗಮ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯ ಬಗ್ಗೆಯೂ ಆಲೋಚಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT