‘ಒಬ್ಬ ವ್ಯಕ್ತಿಯ ಮನಸ್ಸಿನಲ್ಲಿ ಹುಟ್ಟುವ ದ್ವೇಷವು ಸಮುದಾಯದೊಂದಿಗೆ ಬೆಳೆದು, ಆ ದೇಶವನ್ನೇ ಹಾಳುಮಾಡುತ್ತದೆ. ಅಷ್ಟೇ ಅಲ್ಲ, ವಿನಾಶಕ್ಕೆ ಕಾರಣವಾಗುತ್ತದೆ. ಇದನ್ನು ‘ಮಹಾಭಾರತ’ದಲ್ಲಿ ಕಾಣಬಹುದಾಗಿದೆ. ಎರಡು ಸಾವಿರ ವರ್ಷಗಳ ಹಿಂದೆ ರಚಿತವಾಗಿರುವ‘ರಾಮಾಯಣ’ ಮತ್ತು ‘ಮಹಾಭಾರತ’ ಕಾವ್ಯಗಳು ಇಂದಿಗೂ ಪ್ರತಿಯೊಬ್ಬರ ಜೀವನಕ್ಕೆ ಅನ್ವಯವಾಗುತ್ತದೆ’ ಎಂದು ತಿಳಿಸಿದರು.