ಕೋವಿಡ್-19 ಕೊರೊನಾ ವೈರಸ್ ಸೋಂಕು ರೋಗದ ಹತೋಟಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷೇತರ ನೌಕರರ ಒಂದು ದಿನದ ಸಂಬಳದ ಒಟ್ಟು ಮೊತ್ತ ₹ 24,62,879-00 ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳಿನ ವೈಯಕ್ತಿಕ ಸಂಬಳ ₹ 1,64,998-00ಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಯಿತು.