<p><strong>ಬೆಂಗಳೂರು: </strong>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾದ 2013ನೇ ಸಾಲಿನ ಪದವಿ ತರಗತಿಗಳ ಅಭ್ಯರ್ಥಿಗಳಿಗೆ ಉತ್ತೀರ್ಣರಾಗಲು ಇನ್ನೊಂದು ಅವಕಾಶ ಕಲ್ಪಿಸಲಾಗಿದೆ.</p>.<p>‘ಈಚೆಗೆ ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೇ ತಿಂಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಅನುತ್ತೀರ್ಣಗೊಂಡ 8 ಸಾವಿರ ಮಂದಿಗೆ ಮತ್ತೆ ಪರೀಕ್ಷೆ ಬರೆಯುವ ಅವಕಾಶ ಇದೆ, ಆದರೆ ಇದು ಒಂದು ಬಾರಿಯ ಅವಕಾಶ ಮಾತ್ರ, ಮತ್ತೊಮ್ಮೆ ಅವಕಾಶ ಇಲ್ಲ’ ಎಂದು ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.</p>.<p>‘2004ರಿಂದಲೇ ಬಾಕಿ ಉಳಿದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶದ ಬಗ್ಗೆ ಚಿಂತನೆ<br />ನಡೆಯುತ್ತಿದೆಯಷ್ಟೇ, ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ನಾನು ಹೇಳಿದ್ದನ್ನು ಮಾತ್ರ ನಿಖರ ಮಾಹಿತಿ ಎಂದು ತಿಳಿಯ<br />ಬೇಕು’ಎಂದರು.ಮೂರು ವರ್ಷದ ಕೋರ್ಸ್ನಲ್ಲಿ ಅನುತ್ತೀರ್ಣರಾದವರಿಗೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದರೂ 4ನೇ ಬಾರಿಯೂ ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾದ 2013ನೇ ಸಾಲಿನ ಪದವಿ ತರಗತಿಗಳ ಅಭ್ಯರ್ಥಿಗಳಿಗೆ ಉತ್ತೀರ್ಣರಾಗಲು ಇನ್ನೊಂದು ಅವಕಾಶ ಕಲ್ಪಿಸಲಾಗಿದೆ.</p>.<p>‘ಈಚೆಗೆ ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೇ ತಿಂಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಅನುತ್ತೀರ್ಣಗೊಂಡ 8 ಸಾವಿರ ಮಂದಿಗೆ ಮತ್ತೆ ಪರೀಕ್ಷೆ ಬರೆಯುವ ಅವಕಾಶ ಇದೆ, ಆದರೆ ಇದು ಒಂದು ಬಾರಿಯ ಅವಕಾಶ ಮಾತ್ರ, ಮತ್ತೊಮ್ಮೆ ಅವಕಾಶ ಇಲ್ಲ’ ಎಂದು ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.</p>.<p>‘2004ರಿಂದಲೇ ಬಾಕಿ ಉಳಿದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶದ ಬಗ್ಗೆ ಚಿಂತನೆ<br />ನಡೆಯುತ್ತಿದೆಯಷ್ಟೇ, ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ನಾನು ಹೇಳಿದ್ದನ್ನು ಮಾತ್ರ ನಿಖರ ಮಾಹಿತಿ ಎಂದು ತಿಳಿಯ<br />ಬೇಕು’ಎಂದರು.ಮೂರು ವರ್ಷದ ಕೋರ್ಸ್ನಲ್ಲಿ ಅನುತ್ತೀರ್ಣರಾದವರಿಗೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದರೂ 4ನೇ ಬಾರಿಯೂ ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>