<p><strong>ಬೆಂಗಳೂರು:</strong> ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ನ (ಸಿಬಿಎಸ್ಎಂಎಸ್) ಸಂಜೆ ಕಾಲೇಜಿಗೆ 2018-19 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕ ಮೊತ್ತ ₹ 13.73 ಲಕ್ಷ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಎಸ್ಎಂಎಸ್ನ ಮಾಜಿ ನಿರ್ದೇಶಕರಾಗಿದ್ದ ಪ್ರೊ. ಜನಾರ್ದನಮ್ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಶಿವಶಂಕರ್ ಭೈರವ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಈ ಕುರಿತು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿ. ಶಿವರಾಂ ನೀಡಿರುವ ದೂರಿನ ಅನ್ವಯ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಹಾಲಿ ಕುಲಸಚಿವ (ಮೌಲ್ಯಮಾಪನ) ಆಗಿರುವ ಪ್ರೊ. ಜನಾರ್ದನಮ್ ಮತ್ತು ಶಿವಶಂಕರ್ ಭೈರವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>‘2018-19ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರೊ. ಜನಾರ್ದನಮ್ ಅವರು ಸಿಬಿಎಸ್ಎಂಎಸ್ನ ನಿರ್ದೇಶಕರಾಗಿದ್ದರು. ಪರೀಕ್ಷಾ ವಿಭಾಗದ ನಿರ್ವಾಹಕರಾಗಿ ಶಿವಶಂಕರ್ ಕಾರ್ಯನಿರ್ವಹಿಸುತ್ತಿದ್ದರು. ಆ ವರ್ಷ ಎಂಬಿಎಗೆ ಪ್ರವೇಶ ಪಡೆದಿದ್ದ 52 ವಿದ್ಯಾರ್ಥಿಗಳು ಪಾವತಿಸಿದ್ದ ಶುಲ್ಕದಲ್ಲಿ ₹ 13.73 ಲಕ್ಷವನ್ನು ಇವರಿಬ್ಬರೂ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮೆ<br />ಮಾಡಿಸಿಕೊಂಡಿದ್ದರು. ಅಲ್ಲದೆ, ವಿಶ್ವವಿದ್ಯಾಲಯಕ್ಕೆ ಪಾವತಿಸಬೇಕಿದ್ದ ಶುಲ್ಕದ ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಈ ಆರೋಪದ ಕುರಿತು ವಿಶ್ವವಿದ್ಯಾಲಯದಲ್ಲಿ ಆಂತರಿಕ ತನಿಖೆ ನಡೆಸಿದಾಗ ಇಬ್ಬರೂ ಕೂಡ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡಿದ್ದರು’ ಎಂದು ಶಿವರಾಂ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ನ (ಸಿಬಿಎಸ್ಎಂಎಸ್) ಸಂಜೆ ಕಾಲೇಜಿಗೆ 2018-19 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕ ಮೊತ್ತ ₹ 13.73 ಲಕ್ಷ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಎಸ್ಎಂಎಸ್ನ ಮಾಜಿ ನಿರ್ದೇಶಕರಾಗಿದ್ದ ಪ್ರೊ. ಜನಾರ್ದನಮ್ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಶಿವಶಂಕರ್ ಭೈರವ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಈ ಕುರಿತು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿ. ಶಿವರಾಂ ನೀಡಿರುವ ದೂರಿನ ಅನ್ವಯ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಹಾಲಿ ಕುಲಸಚಿವ (ಮೌಲ್ಯಮಾಪನ) ಆಗಿರುವ ಪ್ರೊ. ಜನಾರ್ದನಮ್ ಮತ್ತು ಶಿವಶಂಕರ್ ಭೈರವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>‘2018-19ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರೊ. ಜನಾರ್ದನಮ್ ಅವರು ಸಿಬಿಎಸ್ಎಂಎಸ್ನ ನಿರ್ದೇಶಕರಾಗಿದ್ದರು. ಪರೀಕ್ಷಾ ವಿಭಾಗದ ನಿರ್ವಾಹಕರಾಗಿ ಶಿವಶಂಕರ್ ಕಾರ್ಯನಿರ್ವಹಿಸುತ್ತಿದ್ದರು. ಆ ವರ್ಷ ಎಂಬಿಎಗೆ ಪ್ರವೇಶ ಪಡೆದಿದ್ದ 52 ವಿದ್ಯಾರ್ಥಿಗಳು ಪಾವತಿಸಿದ್ದ ಶುಲ್ಕದಲ್ಲಿ ₹ 13.73 ಲಕ್ಷವನ್ನು ಇವರಿಬ್ಬರೂ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮೆ<br />ಮಾಡಿಸಿಕೊಂಡಿದ್ದರು. ಅಲ್ಲದೆ, ವಿಶ್ವವಿದ್ಯಾಲಯಕ್ಕೆ ಪಾವತಿಸಬೇಕಿದ್ದ ಶುಲ್ಕದ ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಈ ಆರೋಪದ ಕುರಿತು ವಿಶ್ವವಿದ್ಯಾಲಯದಲ್ಲಿ ಆಂತರಿಕ ತನಿಖೆ ನಡೆಸಿದಾಗ ಇಬ್ಬರೂ ಕೂಡ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡಿದ್ದರು’ ಎಂದು ಶಿವರಾಂ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>