‘2018-19ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರೊ. ಜನಾರ್ದನಮ್ ಅವರು ಸಿಬಿಎಸ್ಎಂಎಸ್ನ ನಿರ್ದೇಶಕರಾಗಿದ್ದರು. ಪರೀಕ್ಷಾ ವಿಭಾಗದ ನಿರ್ವಾಹಕರಾಗಿ ಶಿವಶಂಕರ್ ಕಾರ್ಯನಿರ್ವಹಿಸುತ್ತಿದ್ದರು. ಆ ವರ್ಷ ಎಂಬಿಎಗೆ ಪ್ರವೇಶ ಪಡೆದಿದ್ದ 52 ವಿದ್ಯಾರ್ಥಿಗಳು ಪಾವತಿಸಿದ್ದ ಶುಲ್ಕದಲ್ಲಿ ₹ 13.73 ಲಕ್ಷವನ್ನು ಇವರಿಬ್ಬರೂ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮೆ
ಮಾಡಿಸಿಕೊಂಡಿದ್ದರು. ಅಲ್ಲದೆ, ವಿಶ್ವವಿದ್ಯಾಲಯಕ್ಕೆ ಪಾವತಿಸಬೇಕಿದ್ದ ಶುಲ್ಕದ ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಈ ಆರೋಪದ ಕುರಿತು ವಿಶ್ವವಿದ್ಯಾಲಯದಲ್ಲಿ ಆಂತರಿಕ ತನಿಖೆ ನಡೆಸಿದಾಗ ಇಬ್ಬರೂ ಕೂಡ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡಿದ್ದರು’ ಎಂದು ಶಿವರಾಂ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.