ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ನಿಲಯಗಳಲ್ಲಿ ಅನಧಿಕೃತ ವಿದ್ಯಾರ್ಥಿಗಳನ್ನು ಹೊರ ಹಾಕಿ: ಬೆಂಗಳೂರು ವಿವಿ

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಿಂದ ಸುತ್ತೋಲೆ
Last Updated 22 ಅಕ್ಟೋಬರ್ 2022, 19:19 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿನಿಲಯಗಳಲ್ಲಿ ಅನಧಿಕೃತವಾಗಿ ವಾಸಿಸುತ್ತಿ ರುವ ವಿದ್ಯಾರ್ಥಿಗಳು ಮತ್ತು ವ್ಯಕ್ತಿಗಳನ್ನು ಹೊರ ಹಾಕಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಪದೇ ಪದೇ ವಿದ್ಯಾರ್ಥಿಗಳ ನಡುವೆ ಸಂಘರ್ಷ ನಡೆಯುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗುತ್ತಿವೆ. ಕೆಲ ವಿದ್ಯಾರ್ಥಿಗಳು ರಕ್ಷಣೆ ನೀಡಬೇಕು ಎಂದು ವಿಶ್ವವಿದ್ಯಾಲಯಕ್ಕೆ ಹಾಗೂ ಜ್ಞಾನ ಭಾರತಿ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಇಂತಹ ಘಟನೆ ವಿಶ್ವವಿದ್ಯಾಲಯಕ್ಕೆ ಶೋಭೆ ತರುವುದಿಲ್ಲ. ಇದರಿಂದ, ವಿಶ್ವವಿದ್ಯಾಲಯದ ಆವರಣದ ಒಳಗೆ ಶೈಕ್ಷಣಿಕ ವಾತಾ ವರಣಕ್ಕೆ ಪೂರಕವಾಗಿರುವುದಿಲ್ಲ ಎಂದು ಕುಲಸಚಿವರು ತಿಳಿಸಿದ್ದಾರೆ.

ಅನಧಿಕೃತವಾಗಿ ವಿದ್ಯಾರ್ಥಿನಿಲಯಗಳಲ್ಲಿ ವಾಸಿಸುತ್ತಿರುವ ವ್ಯಕ್ತಿಗಳ ಪ್ರಚೋದನೆಯಿಂದ ಇಂತಹ ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಜತೆಗೆ ಅನಧಿಕೃತ ವ್ಯಕ್ತಿಗಳಿಂದ ಅಧಿಕೃತ ವಿದ್ಯಾರ್ಥಿಗಳಿಗೆ ಮೂಲಸೌಕರ್ಯದ ಕೊರತೆ ಮತ್ತು ಭದ್ರತೆಗೆ ತೊಡಕು ಉಂಟಾಗುತ್ತಿದೆ.ಆದ್ದರಿಂದ, ವಿಶ್ವವಿದ್ಯಾಲಯದಲ್ಲಿ ಸೌಹಾರ್ದತೆ, ಶಿಸ್ತು ಹಾಗೂ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ಹಿತದೃಷ್ಟಿಯಿಂದ ಅನಧಿಕೃತ ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳನ್ನು ಕೂಡಲೇ ಗುರುತಿಸಿ ಹೊರ ಹಾಕಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕುಲಸಚಿವರು ವಿದ್ಯಾರ್ಥಿನಿಲಯದ ಕ್ಷೇಮಪಾಲಕರಿಗೆ ಕಟ್ಟನಿಟ್ಟಿನ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT