ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಿಸುವಂತೆ ಒತ್ತಾಯಿಸಿ ಜ್ಞಾನ ಭಾರತಿ ಆವರಣದ ವಿದ್ಯಾರ್ಥಿಗಳು ಸೋಮವಾರದಿಂದ ಅನಿರ್ದಿಷ್ಟಾವಧಿಗೆ ತರಗತಿಗಳನ್ನು ಬಹಿಷ್ಕರಿಸಿದ್ದಾರೆ.
ಸ್ನಾತಕೋತ್ತರ ವಿದ್ಯಾರ್ಥಿನಿಲಯದಿಂದ ಆಡಳಿತ ಕಚೇರಿ ಕಟ್ಟಡದವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.
ಪ್ರತಿಭಟನೆ ಜತೆಗೆ ಕುಲಪತಿ ಅವರನ್ನು ನೇಮಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆಯುವ ಅಭಿಯಾನವನ್ನು ಆರಂಭಿಸಲಾಗಿದೆ.