<p><strong>ಬೆಂಗಳೂರು</strong>: ಉತ್ತರ ಪತ್ರಿಕೆಗಳಲ್ಲಿನ ಅಂಕಗಳನ್ನು ತಿದ್ದಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ , ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪುಸ್ತಕ ಖರೀದಿಯಲ್ಲಿಯೂ ಅಕ್ರಮ ನಡೆದಿದೆ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಆರೋಪಿಸಿದ್ದಾರೆ.</p>.<p>‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಸುಮಾರು ₹30 ಲಕ್ಷ ಮೌಲ್ಯದ ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ’ ಎಂದು ಸದಸ್ಯರೊಬ್ಬರು ಹೇಳಿದ್ದಾರೆ.</p>.<p>ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನಿಸಿತ್ತು. ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಹಲವು ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 992 ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ನೀಡುವುದಕ್ಕಾಗಿ ವಿಶ್ವವಿದ್ಯಾಲಯದ ಎಸ್ಸಿ, ಎಸ್ಟಿ ಘಟಕವು ₹30.69 ಲಕ್ಷ ಮೌಲ್ಯದ ಸ್ಪರ್ಧಾತ್ಮಕ ಪುಸ್ತಕಗಳನ್ನು ಖರೀದಿಸಿದೆ. ಆದರೆ, ಈ ಪುಸ್ತಕಗಳ ಖರೀದಿ ವೇಳೆ ನಿಯಮಗಳನ್ನು ಪಾಲಿಸಿಲ್ಲ’ ಎಂದು ಸಿಂಡಿಕೇಟ್ನ ಹಿರಿಯ ಸದಸ್ಯ ಗೋಪಿನಾಥ್ ದೂರಿದ್ದಾರೆ.</p>.<p>‘ಜಿಎಸ್ಟಿ ಸಂಖ್ಯೆ ಇಲ್ಲದ ಬಿಲ್ ಕೊಟ್ಟಿರುವ ಖಾಸಗಿ ಕಂಪನಿಯಿಂದ ಪುಸ್ತಕಗಳನ್ನು ಖರೀದಿಸಲಾಗಿದೆ. ಟೆಂಡರ್ನಲ್ಲಿ ಇದಕ್ಕಿಂತ ಕಡಿಮೆ ಮೊತ್ತ ನಮೂದಿಸಿದ ಕಂಪನಿಗಳನ್ನು ಬಿಟ್ಟು, ಈ ಖಾಸಗಿ ಕಂಪನಿಯಿಂದ ಪುಸ್ತಕ ಖರೀದಿಸಲಾಗಿದೆ’ ಎಂದು ಅವರು ಹೇಳಿದರು.</p>.<p class="Subhead"><strong>₹65 ಲಕ್ಷ ಬಿಲ್:</strong>‘ವಿಶ್ವವಿದ್ಯಾಲಯದಲ್ಲಿ ಪುಸ್ತಕಗಳನ್ನು ವಿತರಿಸುವುದರ ಜೊತೆಗೆ, ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕ ಹಾಗೂ ಅವುಗಳನ್ನು ಇಟ್ಟುಕೊಳ್ಳಲು ಕಪಾಟುಗಳನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ₹65 ಲಕ್ಷ ಬಿಲ್ ಮಾಡಲಾಗಿದೆ. ಈ ವರ್ಷ ಬಹುತೇಕ ಕಾಲೇಜುಗಳು ಬಂದ್ ಆಗಿದ್ದವು. ಆದರೂ ಬಿಲ್ ಮಂಜೂರು ಮಾಡಲಾಗಿದೆ. ಈ ಬಾರಿ ವಿದ್ಯಾರ್ಥಿಗಳಿಗೆ ಇದರಿಂದ ನಿಜಕ್ಕೂ ಅನುಕೂಲವಾಗಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯಬೇಕಿದೆ’ ಎಂದು ಸಿಂಡಿಕೇಟ್ ಸದಸ್ಯ ಡಾ. ಎಚ್. ಸುಧಾಕರ್ ಹೇಳಿದರು.</p>.<p>‘ಪುಸ್ತಕ ಖರೀದಿ ವೇಳೆ ಅಕ್ರಮ ನಡೆದಿದೆ ಎಂದು ದೂರುಗಳು ಬಂದಿವೆ. ಎಸ್ಸಿ, ಎಸ್ಟಿ ಸಮಿತಿಗೆ ನೋಟಿಸ್ ಕೂಡ ಕೊಟ್ಟಿದ್ದೇನೆ ಮತ್ತು ಈ ಸಂಬಂಧ ವರದಿ ನೀಡುವಂತೆ ಸೂಚಿಸಿದ್ದೇನೆ. ಸಮಿತಿಯು ವರದಿ ನೀಡಿದ ನಂತರ ಅದನ್ನು ಸಿಂಡಿಕೇಟ್ ಮುಂದೆ ಇಡುತ್ತೇನೆ’ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಕೆ. ಜ್ಯೋತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ಪತ್ರಿಕೆಗಳಲ್ಲಿನ ಅಂಕಗಳನ್ನು ತಿದ್ದಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ , ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪುಸ್ತಕ ಖರೀದಿಯಲ್ಲಿಯೂ ಅಕ್ರಮ ನಡೆದಿದೆ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಆರೋಪಿಸಿದ್ದಾರೆ.</p>.<p>‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಸುಮಾರು ₹30 ಲಕ್ಷ ಮೌಲ್ಯದ ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ’ ಎಂದು ಸದಸ್ಯರೊಬ್ಬರು ಹೇಳಿದ್ದಾರೆ.</p>.<p>ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನಿಸಿತ್ತು. ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಹಲವು ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 992 ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ನೀಡುವುದಕ್ಕಾಗಿ ವಿಶ್ವವಿದ್ಯಾಲಯದ ಎಸ್ಸಿ, ಎಸ್ಟಿ ಘಟಕವು ₹30.69 ಲಕ್ಷ ಮೌಲ್ಯದ ಸ್ಪರ್ಧಾತ್ಮಕ ಪುಸ್ತಕಗಳನ್ನು ಖರೀದಿಸಿದೆ. ಆದರೆ, ಈ ಪುಸ್ತಕಗಳ ಖರೀದಿ ವೇಳೆ ನಿಯಮಗಳನ್ನು ಪಾಲಿಸಿಲ್ಲ’ ಎಂದು ಸಿಂಡಿಕೇಟ್ನ ಹಿರಿಯ ಸದಸ್ಯ ಗೋಪಿನಾಥ್ ದೂರಿದ್ದಾರೆ.</p>.<p>‘ಜಿಎಸ್ಟಿ ಸಂಖ್ಯೆ ಇಲ್ಲದ ಬಿಲ್ ಕೊಟ್ಟಿರುವ ಖಾಸಗಿ ಕಂಪನಿಯಿಂದ ಪುಸ್ತಕಗಳನ್ನು ಖರೀದಿಸಲಾಗಿದೆ. ಟೆಂಡರ್ನಲ್ಲಿ ಇದಕ್ಕಿಂತ ಕಡಿಮೆ ಮೊತ್ತ ನಮೂದಿಸಿದ ಕಂಪನಿಗಳನ್ನು ಬಿಟ್ಟು, ಈ ಖಾಸಗಿ ಕಂಪನಿಯಿಂದ ಪುಸ್ತಕ ಖರೀದಿಸಲಾಗಿದೆ’ ಎಂದು ಅವರು ಹೇಳಿದರು.</p>.<p class="Subhead"><strong>₹65 ಲಕ್ಷ ಬಿಲ್:</strong>‘ವಿಶ್ವವಿದ್ಯಾಲಯದಲ್ಲಿ ಪುಸ್ತಕಗಳನ್ನು ವಿತರಿಸುವುದರ ಜೊತೆಗೆ, ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕ ಹಾಗೂ ಅವುಗಳನ್ನು ಇಟ್ಟುಕೊಳ್ಳಲು ಕಪಾಟುಗಳನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ₹65 ಲಕ್ಷ ಬಿಲ್ ಮಾಡಲಾಗಿದೆ. ಈ ವರ್ಷ ಬಹುತೇಕ ಕಾಲೇಜುಗಳು ಬಂದ್ ಆಗಿದ್ದವು. ಆದರೂ ಬಿಲ್ ಮಂಜೂರು ಮಾಡಲಾಗಿದೆ. ಈ ಬಾರಿ ವಿದ್ಯಾರ್ಥಿಗಳಿಗೆ ಇದರಿಂದ ನಿಜಕ್ಕೂ ಅನುಕೂಲವಾಗಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯಬೇಕಿದೆ’ ಎಂದು ಸಿಂಡಿಕೇಟ್ ಸದಸ್ಯ ಡಾ. ಎಚ್. ಸುಧಾಕರ್ ಹೇಳಿದರು.</p>.<p>‘ಪುಸ್ತಕ ಖರೀದಿ ವೇಳೆ ಅಕ್ರಮ ನಡೆದಿದೆ ಎಂದು ದೂರುಗಳು ಬಂದಿವೆ. ಎಸ್ಸಿ, ಎಸ್ಟಿ ಸಮಿತಿಗೆ ನೋಟಿಸ್ ಕೂಡ ಕೊಟ್ಟಿದ್ದೇನೆ ಮತ್ತು ಈ ಸಂಬಂಧ ವರದಿ ನೀಡುವಂತೆ ಸೂಚಿಸಿದ್ದೇನೆ. ಸಮಿತಿಯು ವರದಿ ನೀಡಿದ ನಂತರ ಅದನ್ನು ಸಿಂಡಿಕೇಟ್ ಮುಂದೆ ಇಡುತ್ತೇನೆ’ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಕೆ. ಜ್ಯೋತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>