<p><strong>‘ಬಾ ಇಲ್ಲಿ ಸಂಭವಿಸು’ ದತ್ತಿ ಪ್ರಶಸ್ತಿ ಸ್ಥಾಪನೆ</strong></p>.<p>ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯಲ್ಲಿ ‘ಬಾ ಇಲ್ಲಿ ಸಂಭವಿಸು’ ಶೀರ್ಷಿಕೆಯಡಿ ಕೆ.ಎಲ್. ಲಕ್ಷ್ಮಮ್ಮ ಮತ್ತು ಪ್ರೊ.ಶಿವರಾಮಯ್ಯ ಅವರು ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ.</p>.<p>ಈ ದತ್ತಿ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಸಾಹಿತಿ ಪ್ರೊ.ಶಿವರಾಮಯ್ಯ ಅವರು ₹5 ಲಕ್ಷ ದತ್ತಿನಿಧಿಯನ್ನು ಅಕಾಡೆಮಿಗೆ ಒದಗಿಸಿದ್ದಾರೆ. 2025ನೇ ಸಾಲಿನ ಪ್ರಶಸ್ತಿಗೆ ಪ್ರತ್ಯೇಕವಾಗಿ ₹25 ಸಾವಿರ ನೀಡಿದ್ದಾರೆ. ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದಲ್ಲಿ ರಚನೆಗೊಂಡ ಕೃತಿಯನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದ್ದಾರೆ. </p>.<p><strong>ಜಲಮಂಡಳಿ ಫೋನ್–ಇನ್ ನಾಳೆ</strong></p>.<p>ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ <br>ಫೆಬ್ರವರಿ 13ರ ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.</p>.<p>ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119, 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರು ನೀಡಲು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಬಾ ಇಲ್ಲಿ ಸಂಭವಿಸು’ ದತ್ತಿ ಪ್ರಶಸ್ತಿ ಸ್ಥಾಪನೆ</strong></p>.<p>ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯಲ್ಲಿ ‘ಬಾ ಇಲ್ಲಿ ಸಂಭವಿಸು’ ಶೀರ್ಷಿಕೆಯಡಿ ಕೆ.ಎಲ್. ಲಕ್ಷ್ಮಮ್ಮ ಮತ್ತು ಪ್ರೊ.ಶಿವರಾಮಯ್ಯ ಅವರು ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ.</p>.<p>ಈ ದತ್ತಿ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಸಾಹಿತಿ ಪ್ರೊ.ಶಿವರಾಮಯ್ಯ ಅವರು ₹5 ಲಕ್ಷ ದತ್ತಿನಿಧಿಯನ್ನು ಅಕಾಡೆಮಿಗೆ ಒದಗಿಸಿದ್ದಾರೆ. 2025ನೇ ಸಾಲಿನ ಪ್ರಶಸ್ತಿಗೆ ಪ್ರತ್ಯೇಕವಾಗಿ ₹25 ಸಾವಿರ ನೀಡಿದ್ದಾರೆ. ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದಲ್ಲಿ ರಚನೆಗೊಂಡ ಕೃತಿಯನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದ್ದಾರೆ. </p>.<p><strong>ಜಲಮಂಡಳಿ ಫೋನ್–ಇನ್ ನಾಳೆ</strong></p>.<p>ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ <br>ಫೆಬ್ರವರಿ 13ರ ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.</p>.<p>ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119, 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರು ನೀಡಲು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>