<p><strong>ಬೆಂಗಳೂರು</strong>: ಕೆಲಸ ಬಿಡುವ ವಿಚಾರಕ್ಕೆ ಗಲಾಟೆ ನಡೆದು, ಪತ್ನಿಯ ಕೊಲೆ ಮಾಡಿದ ಪತಿಯನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಅಗ್ರಹಾರ ಲೇಔಟ್ನ ಆಯೇಷಾ ಸಿದ್ದಿಕಿ ಕೊಲೆಯಾದವರು. </p>.<p>ಕೃತ್ಯ ಎಸಗಿದ ಆರೋಪದ ಅಡಿ ಸೈಯದ್ ಜಬಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಯೇಷಾ ಅವರು ಮೂರು ತಿಂಗಳ ಹಿಂದೆ ಸೈಯದ್ನನ್ನು ಮದುವೆ ಆಗಿದ್ದರು.</p>.<p>ಆಯೇಷಾ ಅವರ ಮೊದಲ ಪತಿ ಮೃತಪಟ್ಟಿದ್ದರಿಂದ ಎರಡನೇ ಮದುವೆ ಆಗಿದ್ದರು. ಎರಡನೇ ಪತಿಗೂ ವಿಚ್ಛೇದನ ನೀಡಿ ಆರೋಪಿ ಸೈಯದ್ ಜತೆಗೆ ಮದುವೆ ಆಗಿದ್ದರು. ಆಯೇಷಾ ಮಸಾಜ್ ಪಾರ್ಲರ್, ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದರು. ಆ ಕೆಲಸ ಬಿಡುವಂತೆ ಸೈಯದ್ ಒತ್ತಾಯಿಸಿದ್ದರು. ಕೆಲಸದ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಆಯೇಷಾ ಅವರನ್ನು ಆರೋಪಿ ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಯಲಹಂಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ ಎಂದು ಮೂಲಗಳು ಹೇಳಿವೆ.</p>.<p>ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಲಸ ಬಿಡುವ ವಿಚಾರಕ್ಕೆ ಗಲಾಟೆ ನಡೆದು, ಪತ್ನಿಯ ಕೊಲೆ ಮಾಡಿದ ಪತಿಯನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಅಗ್ರಹಾರ ಲೇಔಟ್ನ ಆಯೇಷಾ ಸಿದ್ದಿಕಿ ಕೊಲೆಯಾದವರು. </p>.<p>ಕೃತ್ಯ ಎಸಗಿದ ಆರೋಪದ ಅಡಿ ಸೈಯದ್ ಜಬಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಯೇಷಾ ಅವರು ಮೂರು ತಿಂಗಳ ಹಿಂದೆ ಸೈಯದ್ನನ್ನು ಮದುವೆ ಆಗಿದ್ದರು.</p>.<p>ಆಯೇಷಾ ಅವರ ಮೊದಲ ಪತಿ ಮೃತಪಟ್ಟಿದ್ದರಿಂದ ಎರಡನೇ ಮದುವೆ ಆಗಿದ್ದರು. ಎರಡನೇ ಪತಿಗೂ ವಿಚ್ಛೇದನ ನೀಡಿ ಆರೋಪಿ ಸೈಯದ್ ಜತೆಗೆ ಮದುವೆ ಆಗಿದ್ದರು. ಆಯೇಷಾ ಮಸಾಜ್ ಪಾರ್ಲರ್, ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದರು. ಆ ಕೆಲಸ ಬಿಡುವಂತೆ ಸೈಯದ್ ಒತ್ತಾಯಿಸಿದ್ದರು. ಕೆಲಸದ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಆಯೇಷಾ ಅವರನ್ನು ಆರೋಪಿ ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಯಲಹಂಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ ಎಂದು ಮೂಲಗಳು ಹೇಳಿವೆ.</p>.<p>ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>