ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮನೆಯಲ್ಲಿದ್ದ ಆನೆ ದಂತ, ಮಾರಲು ಯತ್ನಿಸುತ್ತಿದ್ದವ ಬಂಧನ

Published 11 ಆಗಸ್ಟ್ 2023, 14:32 IST
Last Updated 11 ಆಗಸ್ಟ್ 2023, 14:32 IST
ಅಕ್ಷರ ಗಾತ್ರ

ಬೆಂಗಳೂರು: ಆನೆ ದಂತಗಳನ್ನು ಮಾರಲು ಯತ್ನಿಸುತ್ತಿದ್ದ ಆರೋಪದಡಿ ಶ್ರೀಶೈಲ ಎಂಬಾತನನ್ನು ಆರ್‌.ಎಂ.ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಜೆ.ಸಿ.ನಗರ ನಿವಾಸಿ ಶ್ರೀಶೈಲ, ಉದ್ಯಮಿಯೊಬ್ಬರ ಮನೆಯಲ್ಲಿ ಉದ್ಯಾನ ನಿರ್ವಹಣೆ ಕೆಲಸ ಮಾಡುತ್ತಿದ್ದ. ಸ್ನೇಹಿತ ಸಮೀವುದ್ದೀನ್ ನೀಡಿದ್ದ ದಂತವನ್ನು ವರ್ಷದಿಂದ ಮನೆಯಲ್ಲಿಟ್ಟುಕೊಂಡಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಯಶವಂತಪುರ ಕೈಗಾರಿಕೆ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ಆ.10ರಂದು ನಿಂತಿದ್ದು, ಚೀಲದಲ್ಲಿ ಆನೆದಂತಗಳಿದ್ದವು. ಸ್ಥಳೀಯರೊಬ್ಬರು ಠಾಣೆಗೆ ಮಾಹಿತಿ ನೀಡಿದ್ದರು. ಈತನಿಂದ 7.42 ಕೆ.ಜಿ ತೂಕದ 5 ದಂತಗಳನ್ನು ಜಪ್ತಿ ಮಾಡಲಾಗಿದೆ’ ಎಂದರು.

‘ಆನೆದಂತಗಳನ್ನು ನೀಡಿದ್ದ ಪ್ರಮುಖ ಆರೋಪಿ ಸಮೀವುದ್ದೀನ್ ವಾಪಸು ಒಯ್ದಿರಲಿಲ್ಲ. ದಂತಗಳನ್ನು ಎಲ್ಲಿಂದ ತರಲಾಗಿತ್ತು ಎಂಬುದು ಸಮೀವುದ್ದೀನ್‌ ಬಂಧನದ ಬಳಿಕವೇ ತಿಳಿಯಲಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT