<p><strong>ಬೆಂಗಳೂರು:</strong> ನಗರದ ನಾಗರಿಕರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವಂತೆ ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಖಾಲಿಕೊಡಗಳನ್ನು ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಬೆಂಗಳೂರು ನಗರದಲ್ಲಿ ವಾಸಿಸುವ ಎಲ್ಲ ನಿವಾಸಿಗಳಿಗೆ ಅಗತ್ಯವಿರುವಷ್ಟು ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಆಗಾಗ್ಗೆ ಉದ್ಭವಿಸುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು‘ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>‘ನಗರದ ಕೆರೆಗಳು ಹಾಗೂ ರಾಜಕಾಲುವೆಗಳಲ್ಲಿ ಆಗಿರುವ ಒತ್ತುವರಿ ತೆರವುಗೊಳಿಸಿ, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿದರು.</p>.<p>‘ನಗರದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ನಿವಾಸಿಗಳು ತಮ್ಮ ಮನೆಗಳಿಗೆ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ನಾಗರಿಕರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವಂತೆ ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಖಾಲಿಕೊಡಗಳನ್ನು ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಬೆಂಗಳೂರು ನಗರದಲ್ಲಿ ವಾಸಿಸುವ ಎಲ್ಲ ನಿವಾಸಿಗಳಿಗೆ ಅಗತ್ಯವಿರುವಷ್ಟು ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಆಗಾಗ್ಗೆ ಉದ್ಭವಿಸುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು‘ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>‘ನಗರದ ಕೆರೆಗಳು ಹಾಗೂ ರಾಜಕಾಲುವೆಗಳಲ್ಲಿ ಆಗಿರುವ ಒತ್ತುವರಿ ತೆರವುಗೊಳಿಸಿ, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿದರು.</p>.<p>‘ನಗರದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ನಿವಾಸಿಗಳು ತಮ್ಮ ಮನೆಗಳಿಗೆ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>