<p><strong>ಬೆಂಗಳೂರು:</strong> ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಕಾರ್ಯಕರ್ತರು ನಗರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಾಂಗ್ಲಾದೇಶದ ಮೈಮನ್ಸಿಂಗ್ ಪ್ರದೇಶದಲ್ಲಿ ದೀಪುಚಂದ್ರ ದಾಸ್ ಅವರನ್ನು ಗುಂಪೊಂದು ಮರಕ್ಕೆ ಕಟ್ಟಿಹಾಕಿ ಜೀವಂತ ದಹನ ಮಾಡಿದೆ. ಅಲ್ಲದೇ ಬಾಂಗ್ಲಾದೇಶದಲ್ಲಿ ಹಿಂದೂ ಸಮಾಜದವರನ್ನು ಗುರಿಯಾಗಿಸಿಕೊಂಡು ಅವರ ಮನೆಗಳು ಹಾಗೂ ಅಂಗಡಿಗಳನ್ನು ಸುಟ್ಟು ಹಾಕಲಾಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಿಂದೂ ವಿರೋಧಿ ಹಿಂಸಾಚಾರವನ್ನು ತಡೆಯಲು ಭಾರತ ಸರ್ಕಾರವು ಬಾಂಗ್ಲಾದೇಶದ ಮೇಲೆ ಆರ್ಥಿಕ, ವ್ಯಾಪಾರ ಹಾಗೂ ರಾಜಕೀಯ ನಿರ್ಬಂಧಗಳನ್ನು ವಿಧಿಸಬೇಕು. ಬಾಂಗ್ಲಾದೇಶದ ಉಗ್ರ ಹಾಗೂ ಮತೀಯ ಗುಂಪುಗಳ ವಿರುದ್ಧ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಬಾಂಗ್ಲಾದೇಶದಲ್ಲಿನ ಹಿಂದೂಗಳ ಸುರಕ್ಷತೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಪ್ರಯತ್ನಿಸಬೇಕು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಾಂಗ್ಲಾದೇಶದ ಹೈ ಕಮಿಷನರ್ ಅವರಿಗೆ ಬೆಂಗಳೂರು ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದರು.</p>.<p>ಶ್ರೀರಾಮ ಸೇನೆಯ ಮುಖಂಡ ಸುಂದರೇಶ್ ನರ್ಗಲ್, ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ, ಶ್ರೀರಾಮ ಸೇನೆಯ ನಗರ ಅಧ್ಯಕ್ಷ ಮಂಜುನಾಥ, ದುರ್ಗಾ ಸೇನೆಯ ಸರಸ್ವತಿ ಪ್ರವೀಣ, ಮಲ್ಲಿಕಾರ್ಜುನ ರಾಜು, ವಕೀಲರಾದ ಕೆ.ಕೃಷ್ಣಸ್ವಾಮಿ ಸೇರಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಕಾರ್ಯಕರ್ತರು ನಗರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಾಂಗ್ಲಾದೇಶದ ಮೈಮನ್ಸಿಂಗ್ ಪ್ರದೇಶದಲ್ಲಿ ದೀಪುಚಂದ್ರ ದಾಸ್ ಅವರನ್ನು ಗುಂಪೊಂದು ಮರಕ್ಕೆ ಕಟ್ಟಿಹಾಕಿ ಜೀವಂತ ದಹನ ಮಾಡಿದೆ. ಅಲ್ಲದೇ ಬಾಂಗ್ಲಾದೇಶದಲ್ಲಿ ಹಿಂದೂ ಸಮಾಜದವರನ್ನು ಗುರಿಯಾಗಿಸಿಕೊಂಡು ಅವರ ಮನೆಗಳು ಹಾಗೂ ಅಂಗಡಿಗಳನ್ನು ಸುಟ್ಟು ಹಾಕಲಾಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಿಂದೂ ವಿರೋಧಿ ಹಿಂಸಾಚಾರವನ್ನು ತಡೆಯಲು ಭಾರತ ಸರ್ಕಾರವು ಬಾಂಗ್ಲಾದೇಶದ ಮೇಲೆ ಆರ್ಥಿಕ, ವ್ಯಾಪಾರ ಹಾಗೂ ರಾಜಕೀಯ ನಿರ್ಬಂಧಗಳನ್ನು ವಿಧಿಸಬೇಕು. ಬಾಂಗ್ಲಾದೇಶದ ಉಗ್ರ ಹಾಗೂ ಮತೀಯ ಗುಂಪುಗಳ ವಿರುದ್ಧ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಬಾಂಗ್ಲಾದೇಶದಲ್ಲಿನ ಹಿಂದೂಗಳ ಸುರಕ್ಷತೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಪ್ರಯತ್ನಿಸಬೇಕು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಾಂಗ್ಲಾದೇಶದ ಹೈ ಕಮಿಷನರ್ ಅವರಿಗೆ ಬೆಂಗಳೂರು ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದರು.</p>.<p>ಶ್ರೀರಾಮ ಸೇನೆಯ ಮುಖಂಡ ಸುಂದರೇಶ್ ನರ್ಗಲ್, ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ, ಶ್ರೀರಾಮ ಸೇನೆಯ ನಗರ ಅಧ್ಯಕ್ಷ ಮಂಜುನಾಥ, ದುರ್ಗಾ ಸೇನೆಯ ಸರಸ್ವತಿ ಪ್ರವೀಣ, ಮಲ್ಲಿಕಾರ್ಜುನ ರಾಜು, ವಕೀಲರಾದ ಕೆ.ಕೃಷ್ಣಸ್ವಾಮಿ ಸೇರಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>