<p><strong>ಬೆಂಗಳೂರು:</strong> ಮಾನವ ಕಳ್ಳಸಾಗಣೆಯಾಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಬಾಂಗ್ಲಾದೇಶದ 30 ವರ್ಷದ ಮಹಿಳೆಯನ್ನು ನಗರ ಪೊಲೀಸರು ರಕ್ಷಿಸಿದ್ದಾರೆ. ಸಹಾಯ ಕೋರಿ ಹುಳಿಮಾವು ಪೊಲೀಸ್ ಠಾಣೆಗೆ ಮಹಿಳೆ ಭಾನುವಾರ ಬಂದಿದ್ದರು ಎಂದು ಮೂಲಗಳು ಹೇಳಿವೆ. </p>.<p>‘ಉತ್ತಮ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಭಾರತಕ್ಕೆ ಕರೆತರಲಾಗಿತ್ತು. ನಗರಕ್ಕೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳಿದ್ದರು. ಆರಂಭದಲ್ಲಿ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಕೊಡಿಸಿದ್ದರು. ತಿಂಗಳಿಗೆ ₹ 20 ಸಾವಿರ ಸಂಬಳವನ್ನೂ ನೀಡಿದ್ದರು. ಬಳಿಕ ಎಚ್ಎಸ್ಆರ್ ಲೇಔಟ್ನಲ್ಲಿರುವ ಒಂದು ಮನೆಯಲ್ಲಿ ಇರಿಸಿ ವೇಶ್ಯಾವಾಟಿಕೆಗೆ ತಳ್ಳಿದರು’ ಎಂದು ಪೊಲೀಸರ ಎದುರು ಮಹಿಳೆ ಹೇಳಿಕೊಂಡಿದ್ದಾರೆ.</p>.<p>‘ಆರೋಪಿಗಳು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ನಿರ್ಜನ ಸ್ಥಳಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದರು. ಆರೋಪಿಗಳು ಮಾತುಕತೆಯಲ್ಲಿ ತೊಡಗಿದ್ದಾಗ ತಪ್ಪಿಸಿಕೊಂಡು ಬಂದೆ’ ಎಂಬುದಾಗಿ ಮಹಿಳೆ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ.</p>.<p>‘ಮಹಿಳೆಯನ್ನು ರಕ್ಷಿಸಲಾಗಿದೆ. ಅವರ ದೇಶಕ್ಕೆ ವಾಪಸ್ ಕಳುಹಿಸಲು ಕ್ರಮ ವಹಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾನವ ಕಳ್ಳಸಾಗಣೆಯಾಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಬಾಂಗ್ಲಾದೇಶದ 30 ವರ್ಷದ ಮಹಿಳೆಯನ್ನು ನಗರ ಪೊಲೀಸರು ರಕ್ಷಿಸಿದ್ದಾರೆ. ಸಹಾಯ ಕೋರಿ ಹುಳಿಮಾವು ಪೊಲೀಸ್ ಠಾಣೆಗೆ ಮಹಿಳೆ ಭಾನುವಾರ ಬಂದಿದ್ದರು ಎಂದು ಮೂಲಗಳು ಹೇಳಿವೆ. </p>.<p>‘ಉತ್ತಮ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಭಾರತಕ್ಕೆ ಕರೆತರಲಾಗಿತ್ತು. ನಗರಕ್ಕೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳಿದ್ದರು. ಆರಂಭದಲ್ಲಿ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಕೊಡಿಸಿದ್ದರು. ತಿಂಗಳಿಗೆ ₹ 20 ಸಾವಿರ ಸಂಬಳವನ್ನೂ ನೀಡಿದ್ದರು. ಬಳಿಕ ಎಚ್ಎಸ್ಆರ್ ಲೇಔಟ್ನಲ್ಲಿರುವ ಒಂದು ಮನೆಯಲ್ಲಿ ಇರಿಸಿ ವೇಶ್ಯಾವಾಟಿಕೆಗೆ ತಳ್ಳಿದರು’ ಎಂದು ಪೊಲೀಸರ ಎದುರು ಮಹಿಳೆ ಹೇಳಿಕೊಂಡಿದ್ದಾರೆ.</p>.<p>‘ಆರೋಪಿಗಳು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ನಿರ್ಜನ ಸ್ಥಳಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದರು. ಆರೋಪಿಗಳು ಮಾತುಕತೆಯಲ್ಲಿ ತೊಡಗಿದ್ದಾಗ ತಪ್ಪಿಸಿಕೊಂಡು ಬಂದೆ’ ಎಂಬುದಾಗಿ ಮಹಿಳೆ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ.</p>.<p>‘ಮಹಿಳೆಯನ್ನು ರಕ್ಷಿಸಲಾಗಿದೆ. ಅವರ ದೇಶಕ್ಕೆ ವಾಪಸ್ ಕಳುಹಿಸಲು ಕ್ರಮ ವಹಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>