<p><strong>ಬೆಂಗಳೂರು</strong>: ‘ಬಂಜಾರ ಸಂಸ್ಕೃತಿ, ಆಚರಣೆ, ಸಾಹಿತ್ಯ, ಜೀವನ ವಿಧಾನ ಸೇರಿ ಸಮಗ್ರ ಮಾಹಿತಿ ಒಳಗೊಂಡ ಬಂಜಾರ ವಿಶ್ವಕೋಶವನ್ನು ರಚಿಸಲಾಗುವುದು. ಮುಂದಿನ ವರ್ಷ ಬಂಜಾರ ವಿಶ್ವ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ’ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ ತಿಳಿಸಿದರು. </p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವಕೋಶ ರಚನೆ ಸಂಬಂಧ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ನಾಗಣ್ಣ, ಶ್ರೀದೇವಿ, ಸಣ್ಣರಾಮ ಹಾಗೂ ಕಾ.ತ.ಚಿಕ್ಕಣ್ಣ ಅವರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ. ಈಗಾಗಲೇ ಈ ಸಲಹಾ ಸಮಿತಿಯು ಒಂದು ಸಭೆ ನಡೆಸಿದೆ. ಬೃಹತ್ ವಿಶ್ವಕೋಶ ಹೊರತರಲು ಅಂದಾಜು ₹ 8 ಕೋಟಿ ಅಗತ್ಯವಿದೆ. ಇದು ಐದು ವರ್ಷಗಳ ಯೋಜನೆ ಆಗಿದೆ. ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಹೇಳಿದರು. </p>.<p>‘ಈ ವರ್ಷ ರಾಜ್ಯ ಮಟ್ಟದ ಬಂಜಾರ ಸಂಸ್ಕೃತಿ ಉತ್ಸವ ನಡೆಸಲಾಗುವುದು. ಮುಂದಿನ ವರ್ಷ ಬಂಜಾರ ವಿಶ್ವ ಸಮ್ಮೇಳನ ಆಯೋಜಿಸಲು ಮುಂದಾಗಿದ್ದೇವೆ. ಇದಕ್ಕೆ ಹೆಚ್ಚಿನ ಅನುದಾನ ಅಗತ್ಯವಿದೆ. ಈ ಬಾರಿಯ ಬಜೆಟ್ನಲ್ಲಿ ₹ 2.40 ಕೋಟಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಬಂಜಾರ ಡಿಜಿಟಲ್ ಪದಕೋಶ ಹೊರತರಲು ಕೂಡ ಯೋಜನೆ ರೂಪಿಸಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಂಜಾರ ಸಂಸ್ಕೃತಿ, ಆಚರಣೆ, ಸಾಹಿತ್ಯ, ಜೀವನ ವಿಧಾನ ಸೇರಿ ಸಮಗ್ರ ಮಾಹಿತಿ ಒಳಗೊಂಡ ಬಂಜಾರ ವಿಶ್ವಕೋಶವನ್ನು ರಚಿಸಲಾಗುವುದು. ಮುಂದಿನ ವರ್ಷ ಬಂಜಾರ ವಿಶ್ವ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ’ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ ತಿಳಿಸಿದರು. </p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವಕೋಶ ರಚನೆ ಸಂಬಂಧ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ನಾಗಣ್ಣ, ಶ್ರೀದೇವಿ, ಸಣ್ಣರಾಮ ಹಾಗೂ ಕಾ.ತ.ಚಿಕ್ಕಣ್ಣ ಅವರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ. ಈಗಾಗಲೇ ಈ ಸಲಹಾ ಸಮಿತಿಯು ಒಂದು ಸಭೆ ನಡೆಸಿದೆ. ಬೃಹತ್ ವಿಶ್ವಕೋಶ ಹೊರತರಲು ಅಂದಾಜು ₹ 8 ಕೋಟಿ ಅಗತ್ಯವಿದೆ. ಇದು ಐದು ವರ್ಷಗಳ ಯೋಜನೆ ಆಗಿದೆ. ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಹೇಳಿದರು. </p>.<p>‘ಈ ವರ್ಷ ರಾಜ್ಯ ಮಟ್ಟದ ಬಂಜಾರ ಸಂಸ್ಕೃತಿ ಉತ್ಸವ ನಡೆಸಲಾಗುವುದು. ಮುಂದಿನ ವರ್ಷ ಬಂಜಾರ ವಿಶ್ವ ಸಮ್ಮೇಳನ ಆಯೋಜಿಸಲು ಮುಂದಾಗಿದ್ದೇವೆ. ಇದಕ್ಕೆ ಹೆಚ್ಚಿನ ಅನುದಾನ ಅಗತ್ಯವಿದೆ. ಈ ಬಾರಿಯ ಬಜೆಟ್ನಲ್ಲಿ ₹ 2.40 ಕೋಟಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಬಂಜಾರ ಡಿಜಿಟಲ್ ಪದಕೋಶ ಹೊರತರಲು ಕೂಡ ಯೋಜನೆ ರೂಪಿಸಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>