ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು: ಕೋರ್ಟ್‌ ಹೆಸರಿನಲ್ಲಿ ಆದೇಶ ಸೃಷ್ಟಿಸಿ ಬ್ಯಾಂಕ್‌ಗೆ ₹1.32 ಕೋಟಿ ವಂಚನೆ

* ಹೊರ ರಾಜ್ಯದ ಮೂವರ ಬಂಧನ * ಸಿಸಿಬಿ ಪೊಲೀಸರ ಕಾರ್ಯಾಚರಣೆ
Published : 12 ಏಪ್ರಿಲ್ 2025, 5:28 IST
Last Updated : 12 ಏಪ್ರಿಲ್ 2025, 5:28 IST
ಫಾಲೋ ಮಾಡಿ
Comments
ನೀರಜ್‌ 
ನೀರಜ್‌ 
ಸಾಗರ್‌ 
ಸಾಗರ್‌ 
ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮುಖ ಆರೋಪಿ
‘ಪ್ರಕರಣದ ಪ್ರಮುಖ ಆರೋಪಿ ಸಾಗರ್ ರಾಜಸ್ತಾನದ ಆಕ್ಸಿಸ್ ಬ್ಯಾಂಕ್‌ ಶಾಖೆಯೊಂದರಲ್ಲಿ ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದ. ಬ್ಯಾಂಕ್‌ಗಳಲ್ಲಿ ವಹಿವಾಟು ಸ್ಥಗಿತಗೊಂಡಿರುವ ಹಣವನ್ನು ಬಿಡಿಸಿಕೊಳ್ಳುವುದು ಹೇಗೆ ಎಂಬ ಮಾಹಿತಿ ಆತನಿಗೆ ಇತ್ತು. ಅದೇ ಮಾಹಿತಿ ಆಧರಿಸಿ ವಂಚನೆಗೆ ಸಂಚು ರೂಪಿಸಿದ್ದ’ ಎಂದು ಪೊಲೀಸರು ಹೇಳಿದರು. ‘ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್‌ನಲ್ಲೂ ಸಾಗರ್‌ ಭಾಗಿಯಾಗಿದ್ದ. ಅಲಹಾಬಾದ್ ಪೊಲೀಸರು ಈತನನ್ನು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದ ಬಳಿಕ ಸಾಗರ್ ಬೆಂಗಳೂರಿನ ಹಲಸೂರಿನ ಐಸಿಐಸಿಐ ಬ್ಯಾಂಕ್‌ನಲ್ಲಿ ಫ್ರೀಜ್‌ ಆಗಿದ್ದ ₹1.32 ಕೋಟಿಯ ಬಗ್ಗೆ ತಿಳಿದುಕೊಂಡಿದ್ದ. ಸರ್ಕಾರಿ ಅಧಿಕಾರಿ ರೀತಿ ದಾಖಲಾತಿ ಸಿದ್ಧಪಡಿಸಿಕೊಂಡು ಸರ್ಕಾರಿ ಇ–ಮೇಲ್ ಐ.ಡಿ ಬೇಕೆಂದು ಸರ್ಕಾರ ಅಧೀನದಲ್ಲಿ ಬರುವ ಕೆ–ಸ್ವಾನ್ (ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್‌ವರ್ಕ್) ಆನ್‌ಲೈನ್ ಮೂಲಕ ಮನವಿ ಸಲ್ಲಿಸಿ ಮೇಲ್ ಐ.ಡಿ ಪಡೆದುಕೊಂಡಿದ್ದ’ ಎಂದು ಪೊಲೀಸರು ಹೇಳಿದರು.
ಅಭಿಮನ್ಯು ಬ್ಯಾಂಕ್‌ ಖಾತೆಯಲ್ಲಿ ₹63 ಲಕ್ಷ
ವಂಚನೆ ಎಸಗಿದ ಹಣದ ಪೈಕಿ ₹ 38 ಲಕ್ಷವನ್ನು ಸಾಗರ್ ಪಡೆದಿದ್ದ ಅದನ್ನು ಕ್ಯಾಸಿನೊ ಪಬ್‌ಗಳಲ್ಲಿ ಮೋಜು–ಮಸ್ತಿ ಮಾಡಿ ಖರ್ಚು ಮಾಡಿದ್ದ. ಆತನ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿದಾಗ ಖಾತೆಯಲ್ಲಿ ಹಣ ಇರಲಿಲ್ಲ. ಅಭಿಮನ್ಯು ಬ್ಯಾಂಕ್‌ ಖಾತೆಯಲ್ಲಿದ್ದ ₹ 63 ಲಕ್ಷ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT