ಬ್ಯಾಂಕ್ ಆಫ್ ಬರೋಡದ ವಲಯ ಮುಖ್ಯಸ್ಥ ಮತ್ತು ಜನರಲ್ ಮ್ಯಾನೇಜರ್ ಸುಧಾಕರ ಡಿ. ನಾಯಕ್ ಮಾತನಾಡಿ, ‘ಪ್ರತಿಯೊಬ್ಬರು ಪರಿಸರವನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಪ್ರತಿ ಹೆಜ್ಜೆಯೂ ಸುಸ್ಥಿರ ಜೀವನ ಶೈಲಿಯತ್ತ ತೆಗೆದುಕೊಂಡು ಹೋಗುತ್ತಿದ್ದು, ಪರಿಸರ ಸಂರಕ್ಷಣೆಗೆ ದೊಡ್ಡ ಕೊಡುಗೆ ನೀಡಬಲ್ಲದು’ ಎಂದರು.