ಸ್ಟೇಟ್ ಬ್ಯಾಂಕ್ ಆಫ್ ಸೌರಾಷ್ಟ್ರ, ಸ್ಟೇಟ್ ಬ್ಯಾಂಕ್ ಆಫ್ ಇಂದೋರ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರು, ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಆ್ಯಂಡ್ ಜಯಪುರ, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ ಬ್ಯಾಂಕುಗಳನ್ನು ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ ವಿಲೀನಗೊಳಿಸಲಾಗಿದೆ. ನಿವೃತ್ತಿಯ ನಂತರ ಭಾರತೀಯ ಸ್ಟೇಟ್ ಬ್ಯಾಂಕಿನ ಉದ್ಯೋಗಿಗಳಿಗೆ ದೊರೆಯುವ ಸೌಲಭ್ಯಗಳನ್ನು ಈ ಎಲ್ಲ ಬ್ಯಾಂಕಿನ ಉದ್ಯೋಗಿಗಳಿಗೆ ವಿಸ್ತರಿಸಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ, ವಿಲೀನದ ನಂತರ ಎಸ್ಬಿಐ ತನ್ನ ಮಲತಾಯಿ ಧೋರಣೆಯಿಂದ ಸಹವರ್ತಿ ಬ್ಯಾಂಕ್ಗಳ ನಿವೃತ್ತರಿಗೆ ಯಾವುದೇ ಸೌಲಭ್ಯಗಳನ್ನು ವಿಸ್ತರಿಸಿಲ್ಲ ಎಂದು ಆರೋಪಿಸಿದೆ.