<p><strong>ಬೆಂಗಳೂರು:</strong> ‘ಬನ್ನಂಜೆ ಗೋವಿಂದಾಚಾರ್ಯರ ಅನುವಾದ ಸಾಹಿತ್ಯವು ಶಬ್ದಾನುವಾದ ಆಗಿರದೆ, ಭಾವಾನುವಾದ ಆಗಿರುತ್ತಿತ್ತು. ಹೀಗಾಗಿ ಮೂಲ ಸಾಹಿತ್ಯದಲ್ಲಿ ಇರುತ್ತಿದ್ದ ಭಾಷೆಯ ಸೊಗಡು, ಅನುವಾದ ಸಾಹಿತ್ಯದಲ್ಲೂ ಇರುತ್ತಿತ್ತು’ ಎಂದು ಶಕ್ಷಣ ತಜ್ಞ ಗುರುರಾಜ ಕರ್ಜಗಿ ಅಭಿಪ್ರಾಯಪಟ್ಟರು.</p>.<p>ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ‘ಬನ್ನಂಜೆ ಗೋವಿಂದಾಚಾರ್ಯ ಪುರಸ್ಕಾರ–2024’ ಅನ್ನು ಪ್ರದಾನ ಮಾಡಿ ಅವರು ಮಾತನಾಡಿದರು. ‘ಆಚಾರ್ಯರು ಯಾವುದೇ ಕೃತಿಯನ್ನು ಅನುವಾದಿಸಿದರೂ, ಅಲ್ಲೊಬ್ಬ ಸಂಶೋಧಕ ಜಾಗೃತನಾಗಿರುತ್ತಿದ್ದ. ಈ ಮೂಲಕ ಅನುವಾದ ಕೃತಿಗಳಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿಕೊಳ್ಳುತ್ತಿದ್ದರು ಮತ್ತು ಅವುಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು’ ಎಂದರು.</p>.<p>‘ಸಮಾಜದಲ್ಲಿ ಈಗಾಗಲೇ ಜನಪ್ರಿಯವಾಗಿರುವ ಕತೆಗಳನ್ನು, ಸಂಕಥನಗಳನ್ನು ಪ್ರಶ್ನಿಸಲು ಧೈರ್ಯಬೇಕು. ಬನ್ನಂಜೆ ಅವರು ಆ ಕೆಲಸ ಮಾಡುತ್ತಿದ್ದರು. ಕನಕದಾಸರಿಗೆ ಸಂಬಂಧಿಸಿದ ಕನಕನ ಕಿಂಡಿ ಕತೆಯನ್ನು ಅವರು ಇದೇ ರೀತಿ ಪ್ರಶ್ನಿಸಿದ್ದರು’ ಎಂದರು.</p>.<p>ಬನ್ನಂಜೆ ಗೋವಿಂದಾಚಾರ್ಯ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಸಂಶೋಧಕ ಮತ್ತು ಅನುವಾದಕ ಬಿ.ಎಂ.ರಮೇಶ್, ‘ಒಂದು ಮೂಲಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು ಎಂದಾದರೆ, ಅದಕ್ಕೆ ಅನುವಾದಕ್ಕಿಂತ ಸೂಕ್ತವಾದ ಮಾರ್ಗ ಇನ್ನೊಂದಿಲ್ಲ. ಈ ಕಾರಣದಿಂದಲೇ ಸಂಸ್ಕೃತ ಭಾಷೆಯಲ್ಲಿದ್ದ ಮೂಲ ಮಹಾಭಾರತವನ್ನು ಕನ್ನಡಕ್ಕೆ ಅನುವಾದಿಸಲು ಆರಂಭಿಸಿದೆ. ಮಾತೃಭಾಷೆಯಲ್ಲಿ ವಿಷಯ ವರ್ಣನೆ ಸಾಧ್ಯವಾದಷ್ಟು ಇತರ ಭಾಷೆಯಲ್ಲಿ ಸಾಧ್ಯವಾಗುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬನ್ನಂಜೆ ಗೋವಿಂದಾಚಾರ್ಯರ ಅನುವಾದ ಸಾಹಿತ್ಯವು ಶಬ್ದಾನುವಾದ ಆಗಿರದೆ, ಭಾವಾನುವಾದ ಆಗಿರುತ್ತಿತ್ತು. ಹೀಗಾಗಿ ಮೂಲ ಸಾಹಿತ್ಯದಲ್ಲಿ ಇರುತ್ತಿದ್ದ ಭಾಷೆಯ ಸೊಗಡು, ಅನುವಾದ ಸಾಹಿತ್ಯದಲ್ಲೂ ಇರುತ್ತಿತ್ತು’ ಎಂದು ಶಕ್ಷಣ ತಜ್ಞ ಗುರುರಾಜ ಕರ್ಜಗಿ ಅಭಿಪ್ರಾಯಪಟ್ಟರು.</p>.<p>ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ‘ಬನ್ನಂಜೆ ಗೋವಿಂದಾಚಾರ್ಯ ಪುರಸ್ಕಾರ–2024’ ಅನ್ನು ಪ್ರದಾನ ಮಾಡಿ ಅವರು ಮಾತನಾಡಿದರು. ‘ಆಚಾರ್ಯರು ಯಾವುದೇ ಕೃತಿಯನ್ನು ಅನುವಾದಿಸಿದರೂ, ಅಲ್ಲೊಬ್ಬ ಸಂಶೋಧಕ ಜಾಗೃತನಾಗಿರುತ್ತಿದ್ದ. ಈ ಮೂಲಕ ಅನುವಾದ ಕೃತಿಗಳಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿಕೊಳ್ಳುತ್ತಿದ್ದರು ಮತ್ತು ಅವುಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು’ ಎಂದರು.</p>.<p>‘ಸಮಾಜದಲ್ಲಿ ಈಗಾಗಲೇ ಜನಪ್ರಿಯವಾಗಿರುವ ಕತೆಗಳನ್ನು, ಸಂಕಥನಗಳನ್ನು ಪ್ರಶ್ನಿಸಲು ಧೈರ್ಯಬೇಕು. ಬನ್ನಂಜೆ ಅವರು ಆ ಕೆಲಸ ಮಾಡುತ್ತಿದ್ದರು. ಕನಕದಾಸರಿಗೆ ಸಂಬಂಧಿಸಿದ ಕನಕನ ಕಿಂಡಿ ಕತೆಯನ್ನು ಅವರು ಇದೇ ರೀತಿ ಪ್ರಶ್ನಿಸಿದ್ದರು’ ಎಂದರು.</p>.<p>ಬನ್ನಂಜೆ ಗೋವಿಂದಾಚಾರ್ಯ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಸಂಶೋಧಕ ಮತ್ತು ಅನುವಾದಕ ಬಿ.ಎಂ.ರಮೇಶ್, ‘ಒಂದು ಮೂಲಕೃತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು ಎಂದಾದರೆ, ಅದಕ್ಕೆ ಅನುವಾದಕ್ಕಿಂತ ಸೂಕ್ತವಾದ ಮಾರ್ಗ ಇನ್ನೊಂದಿಲ್ಲ. ಈ ಕಾರಣದಿಂದಲೇ ಸಂಸ್ಕೃತ ಭಾಷೆಯಲ್ಲಿದ್ದ ಮೂಲ ಮಹಾಭಾರತವನ್ನು ಕನ್ನಡಕ್ಕೆ ಅನುವಾದಿಸಲು ಆರಂಭಿಸಿದೆ. ಮಾತೃಭಾಷೆಯಲ್ಲಿ ವಿಷಯ ವರ್ಣನೆ ಸಾಧ್ಯವಾದಷ್ಟು ಇತರ ಭಾಷೆಯಲ್ಲಿ ಸಾಧ್ಯವಾಗುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>