<p><strong>ಬೆಂಗಳೂರು</strong>: ಅರಣ್ಯ ಇಲಾಖೆಗೆ ಸೇರಿದ್ದ ಜಾಗದಲ್ಲಿ ನೆಟ್ಟಿದ್ದ 250 ಸಸಿಗಳನ್ನು ರಾತ್ರೋರಾತ್ರಿ ಕಿತ್ತೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ ಕಳೆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಬನ್ನೇರುಘಟ್ಟ ನೇಚರ್ ಕನ್ಸರ್ವೇಶನ್ ಟ್ರಸ್ಟ್ನ ಪದಾಧಿಕಾರಿಗಳು ದೂರಿದ್ದಾರೆ.</p>.<p>ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಂತಿರುವ ಡೀಮ್ಡ್ ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಕೆಎಸ್ಆರ್ಪಿಎಫ್ ಸಿಬ್ಬಂದಿ ಹಾಗೂ ಟ್ರಸ್ಟ್ನ ಪದಾಧಿಕಾರಿಗಳು ವಾರದ ಹಿಂದೆ ಈ ಸಸಿಗಳನ್ನು ನೆಟ್ಟಿದ್ದರು.</p>.<p>‘ರಾಗಿಹಳ್ಳಿ ಪಂಚಾಯಿತಿಯ ಶಿವನಹಳ್ಳಿ ಗ್ರಾಮದ ಬಳಿ ಇರುವ ಈ ಜಾಗ ಅರಣ್ಯಪ್ರದೇಶಕ್ಕೆ ಸೇರಿದ್ದು. ಈ ಪ್ರದೇಶದ ಸಂರಕ್ಷಣೆ ಉದ್ದೇಶದಿಂದ ನೆಟ್ಟಿದ್ದ ಸಸಿಗಳನ್ನು ಸ್ಥಳೀಯರು ಕಿತ್ತು ಹಾಕಿದ್ದಾರೆ. ಸೌದೆ ಮತ್ತಿತರ ಉದ್ದೇಶಗಳಿಗೆ ಈ ಪ್ರದೇಶವನ್ನು ಬಳಸಿಕೊಳ್ಳುವುದಕ್ಕಾಗಿ ಈ ಕೃತ್ಯ ಎಸಗಲಾಗಿದೆ. ಈ ಪ್ರದೇಶ ತಮಗೆ ಸೇರಿದ್ದು ಎಂದು ಅವರು ವಾದಿಸುತ್ತಾರೆ’ ಎಂದು ಟ್ರಸ್ಟ್ನ ಪದಾಧಿಕಾರಿಯೊಬ್ಬರು ದೂರಿದರು.</p>.<p>‘ಒಂದೇ ರಾತ್ರಿಯಲ್ಲಿ ಎಲ್ಲ ಸಸಿಗಳನ್ನು ಬುಡಸಮೇತ ಕಿತ್ತು ಹಾಕಿದ್ದಾರೆ. ಅರಣ್ಯ ಇಲಾಖೆಯವರೂ ಈ ಬಗ್ಗೆ ದೂರು ದಾಖಲಿಸಿದ್ದಾರೆ.ಕಳೆದ 8ರಂದು ನಾವು ಬನ್ನೇರುಘಟ್ಟ ಠಾಣೆಯಲ್ಲಿ ದೂರು ನೀಡಿದ್ದೇವೆ. ಆದರೂ ಕ್ರಮ ಕೈಗೊಂಡಿಲ್ಲ’ ಎಂದು ಅವರು ಹೇಳಿದರು.</p>.<p>‘ದೂರು ನೀಡಿದಾಗ, ಸ್ವೀಕೃತಿ ಪತ್ರವನ್ನು ಕೂಡ ಇನ್ಸ್ಪೆಕ್ಟರ್ ಕೊಡಲಿಲ್ಲ. ಕೊನೆಗೆ ಜಿಲ್ಲಾ ವರಿಷ್ಠಾಧಿಕಾರಿಗೆ ಕರೆ ಮಾಡಿ, ಸ್ವೀಕೃತಿ ಪತ್ರ ತೆಗೆದುಕೊಳ್ಳಬೇಕಾಯಿತು’ ಎಂದು ಅವರು ಹೇಳಿದರು.</p>.<p>‘ಸ್ಥಳೀಯ ಜನಪ್ರತಿನಿಧಿಗಳ ರಾಜಕೀಯ ಇಚ್ಛಾಶಕ್ತಿಯ ಕೊರತೆಯೂ ಇಂತಹ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಈ ಕುರಿತು ಬನ್ನೇರುಘಟ್ಟ ಇನ್ಸ್ಪೆಕ್ಟರ್ಗೆ ಕರೆ ಮಾಡಲಾಯಿತು. ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅರಣ್ಯ ಇಲಾಖೆಗೆ ಸೇರಿದ್ದ ಜಾಗದಲ್ಲಿ ನೆಟ್ಟಿದ್ದ 250 ಸಸಿಗಳನ್ನು ರಾತ್ರೋರಾತ್ರಿ ಕಿತ್ತೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ ಕಳೆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಬನ್ನೇರುಘಟ್ಟ ನೇಚರ್ ಕನ್ಸರ್ವೇಶನ್ ಟ್ರಸ್ಟ್ನ ಪದಾಧಿಕಾರಿಗಳು ದೂರಿದ್ದಾರೆ.</p>.<p>ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಂತಿರುವ ಡೀಮ್ಡ್ ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಕೆಎಸ್ಆರ್ಪಿಎಫ್ ಸಿಬ್ಬಂದಿ ಹಾಗೂ ಟ್ರಸ್ಟ್ನ ಪದಾಧಿಕಾರಿಗಳು ವಾರದ ಹಿಂದೆ ಈ ಸಸಿಗಳನ್ನು ನೆಟ್ಟಿದ್ದರು.</p>.<p>‘ರಾಗಿಹಳ್ಳಿ ಪಂಚಾಯಿತಿಯ ಶಿವನಹಳ್ಳಿ ಗ್ರಾಮದ ಬಳಿ ಇರುವ ಈ ಜಾಗ ಅರಣ್ಯಪ್ರದೇಶಕ್ಕೆ ಸೇರಿದ್ದು. ಈ ಪ್ರದೇಶದ ಸಂರಕ್ಷಣೆ ಉದ್ದೇಶದಿಂದ ನೆಟ್ಟಿದ್ದ ಸಸಿಗಳನ್ನು ಸ್ಥಳೀಯರು ಕಿತ್ತು ಹಾಕಿದ್ದಾರೆ. ಸೌದೆ ಮತ್ತಿತರ ಉದ್ದೇಶಗಳಿಗೆ ಈ ಪ್ರದೇಶವನ್ನು ಬಳಸಿಕೊಳ್ಳುವುದಕ್ಕಾಗಿ ಈ ಕೃತ್ಯ ಎಸಗಲಾಗಿದೆ. ಈ ಪ್ರದೇಶ ತಮಗೆ ಸೇರಿದ್ದು ಎಂದು ಅವರು ವಾದಿಸುತ್ತಾರೆ’ ಎಂದು ಟ್ರಸ್ಟ್ನ ಪದಾಧಿಕಾರಿಯೊಬ್ಬರು ದೂರಿದರು.</p>.<p>‘ಒಂದೇ ರಾತ್ರಿಯಲ್ಲಿ ಎಲ್ಲ ಸಸಿಗಳನ್ನು ಬುಡಸಮೇತ ಕಿತ್ತು ಹಾಕಿದ್ದಾರೆ. ಅರಣ್ಯ ಇಲಾಖೆಯವರೂ ಈ ಬಗ್ಗೆ ದೂರು ದಾಖಲಿಸಿದ್ದಾರೆ.ಕಳೆದ 8ರಂದು ನಾವು ಬನ್ನೇರುಘಟ್ಟ ಠಾಣೆಯಲ್ಲಿ ದೂರು ನೀಡಿದ್ದೇವೆ. ಆದರೂ ಕ್ರಮ ಕೈಗೊಂಡಿಲ್ಲ’ ಎಂದು ಅವರು ಹೇಳಿದರು.</p>.<p>‘ದೂರು ನೀಡಿದಾಗ, ಸ್ವೀಕೃತಿ ಪತ್ರವನ್ನು ಕೂಡ ಇನ್ಸ್ಪೆಕ್ಟರ್ ಕೊಡಲಿಲ್ಲ. ಕೊನೆಗೆ ಜಿಲ್ಲಾ ವರಿಷ್ಠಾಧಿಕಾರಿಗೆ ಕರೆ ಮಾಡಿ, ಸ್ವೀಕೃತಿ ಪತ್ರ ತೆಗೆದುಕೊಳ್ಳಬೇಕಾಯಿತು’ ಎಂದು ಅವರು ಹೇಳಿದರು.</p>.<p>‘ಸ್ಥಳೀಯ ಜನಪ್ರತಿನಿಧಿಗಳ ರಾಜಕೀಯ ಇಚ್ಛಾಶಕ್ತಿಯ ಕೊರತೆಯೂ ಇಂತಹ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಈ ಕುರಿತು ಬನ್ನೇರುಘಟ್ಟ ಇನ್ಸ್ಪೆಕ್ಟರ್ಗೆ ಕರೆ ಮಾಡಲಾಯಿತು. ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>