‘ಲಾಕ್ಡೌನ್ ತೆರವಾದ ನಂತರ ಪ್ರವಾಸಿಗರ ಸಂಖ್ಯೆ ತೀರಾ ಕಡಿಮೆ ಇತ್ತು. ಈಗ ಉದ್ಯಾನಕ್ಕೆ ಭೇಟಿ ನೀಡುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಜುಲೈನಲ್ಲಿ ₹1.33 ಕೋಟಿಯಷ್ಟೇ ಸಂಗ್ರಹವಾಗಿತ್ತು. ಹೀಗಾಗಿಪ್ರಾಣಿಗಳ ಆಹಾರ, ಸಿಬ್ಬಂದಿ ವೇತನಕ್ಕಾಗಿ ನಾವೇ ₹ 70 ಲಕ್ಷ ನೀಡಬೇಕಾಯಿತು. ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಪರಿಸ್ಥಿತಿ ಸುಧಾರಿಸಿದೆ.ಆದರೆ ಆದಾಯ ಇಲ್ಲ. ಹೀಗಾಗಿ ಅಭಿವೃದ್ಧಿ ಚಟುವಟಿಕೆಗಳಿಗೂ ಮಂಕು ಬಡಿದಿದೆ’ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ‘ಪ್ರಜಾವಾಣಿ’ಗೆ ತಿಳಿಸಿದರು.