<p>ಬೆಂಗಳೂರು: ಸಣ್ಣಕತೆಗಳು ಮನುಷ್ಯನ ಭಾವನೆಗಳಿಗೆ ಸೂಕ್ತ ಅಭಿವ್ಯಕ್ತಿಯ ಮಾಧ್ಯಮವಾಗಬಲ್ಲವು ಎಂದು ಸಾಹಿತಿ ಬಾನು ಮುಷ್ತಾಕ್ ಪ್ರತಿಪಾದಿಸಿದರು.</p><p>ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ವಾರ್ಷಿಕ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ವಿಶೇಷ ಉಪನ್ಯಾಸನೀಡಿದರು.</p><p>‘ನನಗೆ ಉರ್ದು, ಹಿಂದಿ, ಇಂಗ್ಲಿಷ್, ಅರೇಬಿಕ್ ಮುಂತಾದ ಬಹುಭಾಷೆಯ ಜ್ಞಾನವಿದ್ದರೂ ಕನ್ನಡವೇ ನನ್ನ ಮೆಚ್ಚಿನ ಭಾಷೆ’ ಎಂದು ಹೇಳಿದರು.</p><p>‘1948ರಲ್ಲಿ ಕೆಲವು ವಿದ್ಯಾರ್ಥಿನಿಯರೊಂದಿಗೆ ಆರಂಭವಾದ ಈ ಸಂಸ್ಥೆ ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ಆಶ್ರಯ ನೀಡುವ ಮರವಾಗಿದೆ. ಇದು ಹೆಮ್ಮೆಯ ವಿಷಯ’ ಎಂದರು.</p><p>ನಂತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ನಡೆದ ಸಂವಾದದಲ್ಲಿ, ಎಂಟು ವರ್ಷದವರೆಗೆ ಕನ್ನಡದ ಗೊತ್ತಿಲ್ಲದಿದ್ದರೂ, ಕೆಲವೇ ತಿಂಗಳಲ್ಲಿ ಕನ್ನಡವನ್ನು ಸಮರ್ಥವಾಗಿ ಕಲಿತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪಡೆಯುವವರೆಗಿನ ಅನುಭವ ಮತ್ತು ಎದುರಿಸಿದ ಸವಾಲುಗಳನ್ನು ಹಂಚಿಕೊಂಡರು.</p><p>ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕರಾದ ಸಿಸ್ಟರ್ ಅಲ್ಬಿನ, ಪ್ರಾಚಾರ್ಯರಾದ ಲೇಖಾ ಜಾರ್ಜ್, ಸಿಸ್ಟರ್ ಆನೆಟ್, ಸಿಸ್ಟರ್ ಅಯೋನ, ಸುಮಾ ಸಿಂಗ್, ನಿವೃತ್ತ ಪ್ರಾಧ್ಯಾಪಕರು, ಪ್ರಾಧ್ಯಾಪಕರು ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಣ್ಣಕತೆಗಳು ಮನುಷ್ಯನ ಭಾವನೆಗಳಿಗೆ ಸೂಕ್ತ ಅಭಿವ್ಯಕ್ತಿಯ ಮಾಧ್ಯಮವಾಗಬಲ್ಲವು ಎಂದು ಸಾಹಿತಿ ಬಾನು ಮುಷ್ತಾಕ್ ಪ್ರತಿಪಾದಿಸಿದರು.</p><p>ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ವಾರ್ಷಿಕ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ವಿಶೇಷ ಉಪನ್ಯಾಸನೀಡಿದರು.</p><p>‘ನನಗೆ ಉರ್ದು, ಹಿಂದಿ, ಇಂಗ್ಲಿಷ್, ಅರೇಬಿಕ್ ಮುಂತಾದ ಬಹುಭಾಷೆಯ ಜ್ಞಾನವಿದ್ದರೂ ಕನ್ನಡವೇ ನನ್ನ ಮೆಚ್ಚಿನ ಭಾಷೆ’ ಎಂದು ಹೇಳಿದರು.</p><p>‘1948ರಲ್ಲಿ ಕೆಲವು ವಿದ್ಯಾರ್ಥಿನಿಯರೊಂದಿಗೆ ಆರಂಭವಾದ ಈ ಸಂಸ್ಥೆ ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ಆಶ್ರಯ ನೀಡುವ ಮರವಾಗಿದೆ. ಇದು ಹೆಮ್ಮೆಯ ವಿಷಯ’ ಎಂದರು.</p><p>ನಂತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ನಡೆದ ಸಂವಾದದಲ್ಲಿ, ಎಂಟು ವರ್ಷದವರೆಗೆ ಕನ್ನಡದ ಗೊತ್ತಿಲ್ಲದಿದ್ದರೂ, ಕೆಲವೇ ತಿಂಗಳಲ್ಲಿ ಕನ್ನಡವನ್ನು ಸಮರ್ಥವಾಗಿ ಕಲಿತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪಡೆಯುವವರೆಗಿನ ಅನುಭವ ಮತ್ತು ಎದುರಿಸಿದ ಸವಾಲುಗಳನ್ನು ಹಂಚಿಕೊಂಡರು.</p><p>ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕರಾದ ಸಿಸ್ಟರ್ ಅಲ್ಬಿನ, ಪ್ರಾಚಾರ್ಯರಾದ ಲೇಖಾ ಜಾರ್ಜ್, ಸಿಸ್ಟರ್ ಆನೆಟ್, ಸಿಸ್ಟರ್ ಅಯೋನ, ಸುಮಾ ಸಿಂಗ್, ನಿವೃತ್ತ ಪ್ರಾಧ್ಯಾಪಕರು, ಪ್ರಾಧ್ಯಾಪಕರು ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>