ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್‌ ಆ್ಯಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿಲ್ಲ: ಅಬಕಾರಿ ಅಧಿಕಾರಿ

Last Updated 5 ಜುಲೈ 2019, 19:51 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಚಿಕ್ಕಗೊಲ್ಲರಹಟ್ಟಿಯಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಇಲಾಖೆ ವತಿಯಿಂದ ಅನುಮತಿ ನೀಡಿಲ್ಲ ಎಂದು ಅಬಕಾರಿ ಇಲಾಖೆಯ ಸೂಪರಿಂಟೆಂಡೆಂಟ್‌ ಎಚ್‌.ರಮೇಶ್‍ ಕುಮಾರ್ ಹೇಳಿದರು.

ಬಾರ್ ತೆರೆಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರಿಂದ ಮನವಿ ಸ್ವೀಕರಿಸಿ, ‘ಸ್ಥಳೀಯರ ಭಾವನೆಗಳಿಗೆ ವಿರುದ್ಧವಾಗಿ ಬಾರ್‌ ತೆರೆಯಲು ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಎಸ್.ಲೋಕನಾಥ್, ‘ರೆಸ್ಟೋರೆಂಟ್ ಪ್ರಾರಂಭಿಸಲು ಅನುಮತಿ ನೀಡುವಂತೆ ಕೋರಿ ಪಂಚಾಯಿತಿಗೆ ಮನವಿ ಬಂದಿದೆ. ಆದರೆ, ಬಾರ್ ಆ್ಯಂಡ್ ರೆಸ್ಟೋರೆಂಟ್ ಎಂದು ಮಾಲೀಕರು ನಮೂದಿಸಿಲ್ಲ. ಈ ಸಂಬಂಧ ಸಾರ್ವಜನಿಕರಿಂದ ದೂರು ಬಂದಿದೆ. ಹೀಗಾಗಿ, ಅನುಮತಿ ನೀಡುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT