ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಬರಗೂರು ಪ್ರಶಸ್ತಿ'ಗೆ ಕೋಟಿಗಾನಹಳ್ಳಿ ರಾಮಯ್ಯ, ಸುಂದರ್‌ ರಾಜ್‌ ಆಯ್ಕೆ

Published 1 ಜುಲೈ 2023, 14:25 IST
Last Updated 1 ಜುಲೈ 2023, 14:25 IST
ಅಕ್ಷರ ಗಾತ್ರ

ಬೆಂಗಳೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ಸಾಹಿತ್ಯ ಕ್ಷೇತ್ರದಿಂದ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಸಿನಿಮಾ ಕ್ಷೇತ್ರದಿಂದ ಸುಂದರ್‌ ರಾಜ್ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿದೆ. ಕೋಟಿಗಾನಹಳ್ಳಿ ರಾಮಯ್ಯ ಅವರು ದಲಿತ ಚಳವಳಿಯ ಭಾಗವಾಗಿದ್ದರು. ಕೋಲಾರದಲ್ಲಿ ‘ಆದಿಮ’ ಎಂಬ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಸುಂದರ್ ರಾಜ್ ಅವರು ಹವ್ಯಾಸಿ ರಂಗಭೂಮಿಯಿಂದ ಬಂದು, ಪ್ರಯೋಗಾತ್ಮಕ ಮತ್ತು ಮುಖ್ಯ ವಾಹಿನಿ ಸಿನಿಮಾಗಳ ಮೂಲಕ ಪ್ರಸಿದ್ಧ ಕಲಾವಿದರಾಗಿ ಬೆಳೆದಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎ.ವಿ. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ. 

ಇದೇ 7ರಂದು ಸಂಜೆ 4.30ಕ್ಕೆ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಸುಂದರ್ ರಾಜ್
ಸುಂದರ್ ರಾಜ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT