ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿದೆ. ಕೋಟಿಗಾನಹಳ್ಳಿ ರಾಮಯ್ಯ ಅವರು ದಲಿತ ಚಳವಳಿಯ ಭಾಗವಾಗಿದ್ದರು. ಕೋಲಾರದಲ್ಲಿ ‘ಆದಿಮ’ ಎಂಬ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಸುಂದರ್ ರಾಜ್ ಅವರು ಹವ್ಯಾಸಿ ರಂಗಭೂಮಿಯಿಂದ ಬಂದು, ಪ್ರಯೋಗಾತ್ಮಕ ಮತ್ತು ಮುಖ್ಯ ವಾಹಿನಿ ಸಿನಿಮಾಗಳ ಮೂಲಕ ಪ್ರಸಿದ್ಧ ಕಲಾವಿದರಾಗಿ ಬೆಳೆದಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎ.ವಿ. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.