<p>ಬೆಂಗಳೂರು: ‘ಇತ್ತೀಚಿನ ದಿನಗಳಲ್ಲಿ ಜಾತಿಯ ಗತಿಶೀಲತೆ ಬದಲಾಗುತ್ತಿದೆ. ಮೇಲ್ಜಾತಿಗಳು ಉಪಜಾತಿಗಳನ್ನು ಮರೆತು ಒಂದಾಗುತ್ತಿದ್ದಾರೆ. ಆದರೆ, ಕೆಳವರ್ಗದ ಜಾತಿಗಳಲ್ಲಿ ಉಪಜಾತಿಗಳ ಒಡಕು ಹೆಚ್ಚಾಗುತ್ತಿದೆ. ಈ ವೈರುಧ್ಯ ಜಾತಿ ವಿನಾಶಕ್ಕಿಂತ, ಜಾತಿ ವಿಕಾಸಕ್ಕೆ ಸಾಕ್ಷಿಯಾಗುತ್ತಿದೆ’ ಎಂದು ಸಾಹಿತಿಬರಗೂರು ರಾಮಚಂದ್ರಪ್ಪ ತಿಳಿಸಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆಯು ಭಾನುವಾರ ಆಯೋಜಿಸಿದ್ದ ‘ಮೀಸಲಾತಿ: ನೂರು ವರ್ಷ’ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೀಸಲಾತಿ ಬಗ್ಗೆ ಹಲವರಲ್ಲಿ ಅಸಮಾಧಾನ ಇದೆ.ಎಲ್ಲ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರೇ ಆವರಿಸಿದ್ದಾರೆ ಎಂಬ ಅಸಹನೆ ಇದೆ. ಸಂವಿಧಾನ ಎಂದರೆ ಮೀಸಲಾತಿ ಎಂದು ಅರ್ಥೈಸಿಕೊಂಡಿದ್ದಾರೆ. ಆದರೆ, ಕೆಳವರ್ಗದ ಎಷ್ಟು ಮಂದಿಗೆ ಉನ್ನತ ಸ್ಥಾನಗಳು ಸಿಕ್ಕಿವೆ ಎಂಬುದನ್ನು ಮೂಲಭೂತವಾದಿಗಳು ಪ್ರಶ್ನಿಸಿಕೊಳ್ಳಬೇಕು’ ಎಂದರು.</p>.<p>‘ಮನುವಾದ ವಿರೋಧಿಸುವ ಮೂಲಕ ಸಮಾಜದಲ್ಲಿ ಶೋಷಣೆಗೆ ಒಳಗಾದವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಮಾನವತಾವಾದದ ಮೀಸಲಾತಿ ಸಹಕಾರಿಯಾಯಿತು.ಇದರಿಂದ ಅನೇಕರಿಗೆ ಉದ್ಯೋಗ ಸಿಕ್ಕಿದೆ. ಶೋಷಿತರು, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯ ಅಭಿವೃದ್ಧಿಯಾಗಿದೆ’ ಎಂದರು.</p>.<p class="Subhead">‘ಗಾಂಧಿಯನ್ನು ಹತ್ಯೆಗೈದ ಗೋಡ್ಸೆ ಹೆಸರು ಹೇಳಲು ಜನ ಹಿಂಜರಿಯುತ್ತಾರೆ.ಸಂವಿಧಾನ ಸುಟ್ಟು ವಿಕೃತಿ ಮೆರೆಯುವ, ಗಾಂಧಿ ಅವರ ಪ್ರತಿಕೃತಿಗೆ ಗುಂಡು ಹಾರಿಸುವ ಮನೋವಿಕಾರ ಉಳ್ಳವರಿದ್ದಾರೆ.ಮೀಸಲಾತಿ ಮೆರಿಟ್ ವಿರೋಧಿ ಎನ್ನುವವರಿದ್ದಾರೆ. ನನ್ನ ಪ್ರಕಾರ ಈ ಪ್ರವೃತ್ತಿ ಅಪ್ಪಟ ಹುಸಿ’ ಎಂದರು.</p>.<p>ಸಾಹಿತಿ ರಾಜಪ್ಪ ದಳವಾಯಿ, ‘ಸಂವಿಧಾನದಲ್ಲಿ ಮೀಸಲಾತಿ ಉಲ್ಲೇಖಿಸುವ ಹಲವು ವಿಧಿಗಳಿವೆ. ಹಲವರಿಗೆ ಇದರ ಇದರ ಮಾಹಿತಿ ಇಲ್ಲ. ಈ ಎಲ್ಲ ವಿಧಿಗಳ ಸಮರ್ಪಕ ಬಳಕೆಯಲ್ಲಿ ಹಿಂದುಳಿದ ವರ್ಗ ಸೋತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಇತ್ತೀಚಿನ ದಿನಗಳಲ್ಲಿ ಜಾತಿಯ ಗತಿಶೀಲತೆ ಬದಲಾಗುತ್ತಿದೆ. ಮೇಲ್ಜಾತಿಗಳು ಉಪಜಾತಿಗಳನ್ನು ಮರೆತು ಒಂದಾಗುತ್ತಿದ್ದಾರೆ. ಆದರೆ, ಕೆಳವರ್ಗದ ಜಾತಿಗಳಲ್ಲಿ ಉಪಜಾತಿಗಳ ಒಡಕು ಹೆಚ್ಚಾಗುತ್ತಿದೆ. ಈ ವೈರುಧ್ಯ ಜಾತಿ ವಿನಾಶಕ್ಕಿಂತ, ಜಾತಿ ವಿಕಾಸಕ್ಕೆ ಸಾಕ್ಷಿಯಾಗುತ್ತಿದೆ’ ಎಂದು ಸಾಹಿತಿಬರಗೂರು ರಾಮಚಂದ್ರಪ್ಪ ತಿಳಿಸಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆಯು ಭಾನುವಾರ ಆಯೋಜಿಸಿದ್ದ ‘ಮೀಸಲಾತಿ: ನೂರು ವರ್ಷ’ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೀಸಲಾತಿ ಬಗ್ಗೆ ಹಲವರಲ್ಲಿ ಅಸಮಾಧಾನ ಇದೆ.ಎಲ್ಲ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರೇ ಆವರಿಸಿದ್ದಾರೆ ಎಂಬ ಅಸಹನೆ ಇದೆ. ಸಂವಿಧಾನ ಎಂದರೆ ಮೀಸಲಾತಿ ಎಂದು ಅರ್ಥೈಸಿಕೊಂಡಿದ್ದಾರೆ. ಆದರೆ, ಕೆಳವರ್ಗದ ಎಷ್ಟು ಮಂದಿಗೆ ಉನ್ನತ ಸ್ಥಾನಗಳು ಸಿಕ್ಕಿವೆ ಎಂಬುದನ್ನು ಮೂಲಭೂತವಾದಿಗಳು ಪ್ರಶ್ನಿಸಿಕೊಳ್ಳಬೇಕು’ ಎಂದರು.</p>.<p>‘ಮನುವಾದ ವಿರೋಧಿಸುವ ಮೂಲಕ ಸಮಾಜದಲ್ಲಿ ಶೋಷಣೆಗೆ ಒಳಗಾದವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಮಾನವತಾವಾದದ ಮೀಸಲಾತಿ ಸಹಕಾರಿಯಾಯಿತು.ಇದರಿಂದ ಅನೇಕರಿಗೆ ಉದ್ಯೋಗ ಸಿಕ್ಕಿದೆ. ಶೋಷಿತರು, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯ ಅಭಿವೃದ್ಧಿಯಾಗಿದೆ’ ಎಂದರು.</p>.<p class="Subhead">‘ಗಾಂಧಿಯನ್ನು ಹತ್ಯೆಗೈದ ಗೋಡ್ಸೆ ಹೆಸರು ಹೇಳಲು ಜನ ಹಿಂಜರಿಯುತ್ತಾರೆ.ಸಂವಿಧಾನ ಸುಟ್ಟು ವಿಕೃತಿ ಮೆರೆಯುವ, ಗಾಂಧಿ ಅವರ ಪ್ರತಿಕೃತಿಗೆ ಗುಂಡು ಹಾರಿಸುವ ಮನೋವಿಕಾರ ಉಳ್ಳವರಿದ್ದಾರೆ.ಮೀಸಲಾತಿ ಮೆರಿಟ್ ವಿರೋಧಿ ಎನ್ನುವವರಿದ್ದಾರೆ. ನನ್ನ ಪ್ರಕಾರ ಈ ಪ್ರವೃತ್ತಿ ಅಪ್ಪಟ ಹುಸಿ’ ಎಂದರು.</p>.<p>ಸಾಹಿತಿ ರಾಜಪ್ಪ ದಳವಾಯಿ, ‘ಸಂವಿಧಾನದಲ್ಲಿ ಮೀಸಲಾತಿ ಉಲ್ಲೇಖಿಸುವ ಹಲವು ವಿಧಿಗಳಿವೆ. ಹಲವರಿಗೆ ಇದರ ಇದರ ಮಾಹಿತಿ ಇಲ್ಲ. ಈ ಎಲ್ಲ ವಿಧಿಗಳ ಸಮರ್ಪಕ ಬಳಕೆಯಲ್ಲಿ ಹಿಂದುಳಿದ ವರ್ಗ ಸೋತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>