‘ತಮಿಳು ಭಾಷೆ 2004ರಲ್ಲಿ ಶಾಸ್ತ್ರೀಯ ಭಾಷೆ ಸ್ಥಾನ ಪಡೆದುಕೊಂಡಿತು. ಕನ್ನಡ ಭಾಷೆಗೆ 2008ರಲ್ಲಿ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಕ್ಕಿತು. ಆದರೆ, ಈ ಭಾಷೆಗೆ ಸಂಬಂಧಿಸಿದಂತೆ ನಂತರದ ಬೆಳವಣಿಗೆಗಳು ನಿರಾಶಾದಾಯಕ. ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕ ಬಳಿಕ ಸ್ವಾಯತ್ತ ಸಂಸ್ಥೆ ಸ್ಥಾಪಿಸಿ, ಯೋಜನೆಗಳನ್ನು ರೂಪಿಸಿದರೆ ಮಾತ್ರ ಕೇಂದ್ರ ಸರ್ಕಾರದಿಂದ ಅನುದಾನ ಸಿಗಲಿದೆ. ಕನ್ನಡಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸ್ವಾಯತ್ತ ಸಂಸ್ಥೆ ಸ್ಥಾಪಿಸುವ ಬದಲು, ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಅಡಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ತರಲಾಗಿದೆ. ತಮಿಳುನಾಡಿನಲ್ಲಿ ಈ ಕೇಂದ್ರ ಸ್ವಾಯತ್ತ ಸಂಸ್ಥೆಯಾಗಿ ರೂಪುಗೊಂಡಿದೆ. ಆದರೆ, ನಮ್ಮ ರಾಜ್ಯ ಸರ್ಕಾರಕ್ಕೆ ಇದು ಸಾಧ್ಯವಾಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.