ಮೆಟ್ರೊ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣು ಅಗೆಯಲು ತಾತ್ಕಾಲಿಕ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಬುಧವಾರ ಸಂಜೆ 5.45ರ ಹೊತ್ತಿಗೆ ಸುರಿದ ಮಳೆಗೆ ತಡೆ ಕುಸಿದಿದೆ. ಇದರಿಂದ ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಹಾಗಾಗಿ ಈ ರಸ್ತೆಯನ್ನು ಮುಚ್ಚಲಾಗಿದೆ. ರಸ್ತೆ ದುರಸ್ತಿಯಾಗುವವರೆಗೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.