‘ಸರ್ಕಾರ ಘೋಷಿಸಿದ ಹೊಸ ತಾಲ್ಲೂಕುಗಳಲ್ಲಿ ಕೆಲವು ಕಡೆ ಹೊಸ ತಾಲ್ಲೂಕುಗಳನ್ನು ಮಾತ್ರ ವಿಭಜಿಸಿದ್ದು, ಕೆಲವು ಕಡೆ ವಿಭಜಿಸಿಲ್ಲ. ಎಲ್ಲ ತಾಲ್ಲೂಕು, ಜಿಲ್ಲೆಗಳಲ್ಲಿ ಚುನಾವಣಾಧಿ ಕಾರಿಗಳು ಇನ್ನೂ ಚುನಾವಣಾ ಪ್ರಕ್ರಿಯೆ ಆರಂಭಿಸಿಲ್ಲ. ನಿವೃತ್ತ ಹಾಗೂ ಖಾಸಗಿ ವ್ಯಕ್ತಿಗಳಿಂದ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣೆಯ ಸ್ಥಳ, ಚುನಾವಣಾ ಆಧಿಕಾರಿಗಳು ಯಾರೆಂದು ಗೊತ್ತಾಗದೆ ಗೊಂದಲವಾಗಿದೆ. ಸಾಮಾನ್ಯ ಚುನಾವಣಾ ಪ್ರಕ್ರಿಯೆಯ ನಿಯಮಗಳನ್ನೂ ಅನುಸರಿಸಿಲ್ಲ. ಚುನಾವಣಾ ಪ್ರಕ್ರಿಯೆ ಪಾರದರ್ಶಕ ವಾಗಿಲ್ಲ’ ಎಂಬ ಕಾರಣಕ್ಕೆತಡೆ ಹಿಡಿಯಲಾಗಿದೆ ಎಂದು ಗೊತ್ತಾಗಿದೆ.