<p>ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿಚಾರಧಾರೆಯ ಬಗ್ಗೆ ಯುವ ಪೀಳಿಗೆಯಲ್ಲಿ ಹೆಚ್ಚಿನ ಅರಿವು ಮೂಡಿಸಲು "ಬಸವ ತತ್ವ ಅಧ್ಯಯನ ಪೀಠ" ಸ್ಥಾಪಿಸುವ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಕುಲಪತಿಗಳಾದ ಪ್ರೊ. ರಮೇಶ್.ಬಿ. ಪ್ರಕಟಿಸಿದ್ದಾರೆ. </p><p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ರಾಜಾಜಿ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಸಮಸಮಾಜ ನಿರ್ಮಾಣದ ಗುರಿ ಸಾಧನೆಯ ನಿಟ್ಟಿನಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಕಾಯಕಯೋಗಿ ಬಸವಣ್ಣನವರ ಕೊಡುಗೆ ಅನನ್ಯ ಎಂದು ಬಣ್ಣಿಸಿದರು.</p><p>ಜಾತಿ ಪದ್ಧತಿ, ಕಂದಾಚಾರ ಮತ್ತು ಮೌಢ್ಯತೆಯ ಕೂಪದಲ್ಲಿ ಸಿಲುಕಿದ್ದ ಅಂದಿನ ವ್ಯವಸ್ಥೆಯಲ್ಲಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಲಿಂಗ ಸಮಾನತೆಯ ಆಶಯಗಳನ್ನು ದಿಟ್ಟತನದಿಂದ ಎತ್ತಿಹಿಡಿಯುವ ಮೂಲಕ ಬಸವಣ್ಣನವರು ಕ್ರಾಂತಿಕಾರಿ ಪರಿಣಾಮ ಬೀರಿದರೆಂದು ಅವರು ವಿಶ್ಲೇಷಿಸಿದರು.</p><p>ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಜಗತ್ತಿಗೆ ಸಾರಿದ ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ಧ್ಯೇಯದ ಮೂಲಕ ಶ್ರಮ ಸಂಸ್ಕೃತಿಯ ಸಂದೇಶವನ್ನು ಪ್ರತಿಪಾದಿಸಿದರೆಂದು ಅವರು ವಿಶ್ಲೇಷಿಸಿದರು.</p><p>ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂಬ ಬಸವಣ್ಣನವರ ವಿಚಾರಧಾರೆ ಚಲನಶೀಲತೆ ತತ್ವಾಧಾರಿತ ಸಾರ್ವಕಾಲಿಕ ವೈಜ್ಞಾನಿಕ ಸತ್ಯವೆಂದು ಪ್ರೊ. ರಮೇಶ್.ಬಿ. ವ್ಯಾಖ್ಯಾನಿಸಿದರು. ಶರಣ ಚಳವಳಿಯ ಉದಾತ್ತ ಆದರ್ಶಗಳು ಇಂದಿಗೂ ಅತ್ಯಂತ ಪ್ರಸ್ತುತ ಎಂದು ಅವರು ಅಭಿಪ್ರಾಯಪಟ್ಟರು.</p><p>ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಂಡಿಕೇಟ್ ಸದಸ್ಯರಾದ ಕೆ.ಪಿ.ಪಾಟೀಲ್ ರವರು ಅಂತರ್ಜಾತೀಯ ವಿವಾಹದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ ಬಸವಣ್ಣನವರು ಸಾಮಾಜಿಕ ಸಮಾನತೆಯ ಹರಿಕಾರರೆಂದು ಕೊಂಡಾಡಿದರು.</p><p>ವೈದಿಕ ಧರ್ಮ ಮತ್ತು ಸಂಸ್ಕೃತಿಯನ್ನು ತಿರಸ್ಕರಿಸಿದ ಬಸವಣ್ಣನವರು ವಚನ ಸಾಹಿತ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವ ಮಹತ್ಕಾರ್ಯದಲ್ಲಿ ಮಹಿಳೆಯರೂ ಸೇರಿದಂತೆ ಶೋಷಿತ ಜನವರ್ಗವನ್ನು ತೊಡಗಿಸಿದರೆಂದು ಅವರು ವಿವರಿಸಿದರು.</p><p>ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ. ಬಿ.ಕುಡೇನಟ್ಟಿ, ಹಿರಿಯ ಪ್ರಾಧ್ಯಾಪಕರಾದ ಪ್ರೊ. ಪಿ.ಆರ್.ಚೇತನ, ಸಿಂಡಿಕೇಟ್ ಸದಸ್ಯರಾದ ಡಾ. ಕೃಷ್ಣರಾಮ್, ಶಿವಕುಮಾರ್, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾದ </p><p>ಡಾ. ಅಬ್ದುಲ್ ಖಾದರ್ ಮತ್ತು ಧರ್ಮೇಂದ್ರ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಡಾ.ಗೋಪಿ. ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು. ಡಾ.ಮಂಜು.ಸಿ.ಎನ್. ಮತ್ತು ಡಾ ಪ್ರಭು ವಚನ ಗಾಯನ ಪ್ರಸ್ತುತಪಡಿಸಿದರು. ಡಾ. ತೇಜೇಶ್ವರ್ ಸ್ವಾಗತಿಸಿ ಡಾ ಅಖ್ತರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿಚಾರಧಾರೆಯ ಬಗ್ಗೆ ಯುವ ಪೀಳಿಗೆಯಲ್ಲಿ ಹೆಚ್ಚಿನ ಅರಿವು ಮೂಡಿಸಲು "ಬಸವ ತತ್ವ ಅಧ್ಯಯನ ಪೀಠ" ಸ್ಥಾಪಿಸುವ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಕುಲಪತಿಗಳಾದ ಪ್ರೊ. ರಮೇಶ್.ಬಿ. ಪ್ರಕಟಿಸಿದ್ದಾರೆ. </p><p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ರಾಜಾಜಿ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಸಮಸಮಾಜ ನಿರ್ಮಾಣದ ಗುರಿ ಸಾಧನೆಯ ನಿಟ್ಟಿನಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಕಾಯಕಯೋಗಿ ಬಸವಣ್ಣನವರ ಕೊಡುಗೆ ಅನನ್ಯ ಎಂದು ಬಣ್ಣಿಸಿದರು.</p><p>ಜಾತಿ ಪದ್ಧತಿ, ಕಂದಾಚಾರ ಮತ್ತು ಮೌಢ್ಯತೆಯ ಕೂಪದಲ್ಲಿ ಸಿಲುಕಿದ್ದ ಅಂದಿನ ವ್ಯವಸ್ಥೆಯಲ್ಲಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಲಿಂಗ ಸಮಾನತೆಯ ಆಶಯಗಳನ್ನು ದಿಟ್ಟತನದಿಂದ ಎತ್ತಿಹಿಡಿಯುವ ಮೂಲಕ ಬಸವಣ್ಣನವರು ಕ್ರಾಂತಿಕಾರಿ ಪರಿಣಾಮ ಬೀರಿದರೆಂದು ಅವರು ವಿಶ್ಲೇಷಿಸಿದರು.</p><p>ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಜಗತ್ತಿಗೆ ಸಾರಿದ ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ಧ್ಯೇಯದ ಮೂಲಕ ಶ್ರಮ ಸಂಸ್ಕೃತಿಯ ಸಂದೇಶವನ್ನು ಪ್ರತಿಪಾದಿಸಿದರೆಂದು ಅವರು ವಿಶ್ಲೇಷಿಸಿದರು.</p><p>ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂಬ ಬಸವಣ್ಣನವರ ವಿಚಾರಧಾರೆ ಚಲನಶೀಲತೆ ತತ್ವಾಧಾರಿತ ಸಾರ್ವಕಾಲಿಕ ವೈಜ್ಞಾನಿಕ ಸತ್ಯವೆಂದು ಪ್ರೊ. ರಮೇಶ್.ಬಿ. ವ್ಯಾಖ್ಯಾನಿಸಿದರು. ಶರಣ ಚಳವಳಿಯ ಉದಾತ್ತ ಆದರ್ಶಗಳು ಇಂದಿಗೂ ಅತ್ಯಂತ ಪ್ರಸ್ತುತ ಎಂದು ಅವರು ಅಭಿಪ್ರಾಯಪಟ್ಟರು.</p><p>ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಂಡಿಕೇಟ್ ಸದಸ್ಯರಾದ ಕೆ.ಪಿ.ಪಾಟೀಲ್ ರವರು ಅಂತರ್ಜಾತೀಯ ವಿವಾಹದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ ಬಸವಣ್ಣನವರು ಸಾಮಾಜಿಕ ಸಮಾನತೆಯ ಹರಿಕಾರರೆಂದು ಕೊಂಡಾಡಿದರು.</p><p>ವೈದಿಕ ಧರ್ಮ ಮತ್ತು ಸಂಸ್ಕೃತಿಯನ್ನು ತಿರಸ್ಕರಿಸಿದ ಬಸವಣ್ಣನವರು ವಚನ ಸಾಹಿತ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವ ಮಹತ್ಕಾರ್ಯದಲ್ಲಿ ಮಹಿಳೆಯರೂ ಸೇರಿದಂತೆ ಶೋಷಿತ ಜನವರ್ಗವನ್ನು ತೊಡಗಿಸಿದರೆಂದು ಅವರು ವಿವರಿಸಿದರು.</p><p>ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ. ಬಿ.ಕುಡೇನಟ್ಟಿ, ಹಿರಿಯ ಪ್ರಾಧ್ಯಾಪಕರಾದ ಪ್ರೊ. ಪಿ.ಆರ್.ಚೇತನ, ಸಿಂಡಿಕೇಟ್ ಸದಸ್ಯರಾದ ಡಾ. ಕೃಷ್ಣರಾಮ್, ಶಿವಕುಮಾರ್, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾದ </p><p>ಡಾ. ಅಬ್ದುಲ್ ಖಾದರ್ ಮತ್ತು ಧರ್ಮೇಂದ್ರ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಡಾ.ಗೋಪಿ. ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು. ಡಾ.ಮಂಜು.ಸಿ.ಎನ್. ಮತ್ತು ಡಾ ಪ್ರಭು ವಚನ ಗಾಯನ ಪ್ರಸ್ತುತಪಡಿಸಿದರು. ಡಾ. ತೇಜೇಶ್ವರ್ ಸ್ವಾಗತಿಸಿ ಡಾ ಅಖ್ತರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>