ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಜಯಂತಿ: ಪ್ರಬಂಧ, ಕವನ ಸ್ಪರ್ಧೆಗೆ ಆಹ್ವಾನ

Published 17 ಫೆಬ್ರುವರಿ 2024, 15:32 IST
Last Updated 17 ಫೆಬ್ರುವರಿ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ‘ಬಸವ ಜಯಂತಿ ಅಂಗವಾಗಿ ಬಸವ ಸಮಿತಿ ವತಿಯಿಂದ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರಿವು–ಆಚಾರ–ಅನುಭಾವ, ಭಾರತೀಯ ದಾರ್ಶನಿಕ ಪರಂಪರೆ ಮತ್ತು ಬಸವ ದರ್ಶನ, ವಚನ ಚಳವಳಿ–ಸಾಂಸ್ಕೃತಿಕ ಮುಖಾಮುಖಿ, ರಾಜಪ್ರಭುತ್ವ, ಪ್ರಜಾಪ್ರಭುತ್ವ ಮತ್ತು ಶರಣರ ಪ್ರಜಾಪ್ರಭುತ್ವ ಹಾಗೂ ಭಾರತೀಯ ಭಕ್ತಿ ಪರಂಪರೆಯಲ್ಲಿ ಭಕ್ತಿಭಂಡಾರಿ ಬಸವಣ್ಣ ಎಂಬ ವಿಷಯಗಳ ಕುರಿತು ಪ್ರಬಂಧವನ್ನು ಬರೆಯಬಹುದು. ಬಸವಾದಿ ಶರಣರ ತತ್ವಗಳಿಗೆ ಸೀಮಿತವಾಗಿರತಕ್ಕದ್ದು ಎಂಬ ವಿಷಯದ ಮೇಲೆ ಕವನಗಳನ್ನು ರಚಿಸಬಹುದು’ ಎಂದು ತಿಳಿಸಿದರು.

‘ಪ್ರಬಂಧವು 2 ಸಾವಿರ ಪದಗಳ ಮಿತಿಯಲ್ಲಿರಬೇಕು. ಕವನವು ಒಂದು ಪುಟ ಮೀರಬಾರದು. ಪ್ರಬಂಧ ಮತ್ತು ಕವನಗಳನ್ನು ಮಾರ್ಚ್‌ 31ರೊಳಗೆ competition@basavasamithi.org ಇ–ಮೇಲ್‌ಗೆ ಕಳಿಸಿಬೇಕು’ ಎಂದರು.

‘ಪ್ರಬಂಧ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆಯುವವರಿಗೆ ₹25 ಸಾವಿರ, ಎರಡನೇ ಸ್ಥಾನ– ₹10 ಸಾವಿರ, ಮೂರನೇ ಸ್ಥಾನ ಪಡೆದವರಿಗೆ ₹5 ಸಾವಿರ ಹಾಗೂ ಕವನ ಸ್ಪರ್ಧೆಯಲ್ಲಿ ಅಗ್ರ ಮೂರು ಸ್ಥಾನ ಪಡೆದವರಿಗೆ ಕ್ರಮವಾಗಿ ₹10 ಸಾವಿರ, ₹5 ಸಾವಿರ ಹಾಗೂ ₹3 ಸಾವಿರ ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು’ ಎಂದು ಹೇಳಿದರು.

ಮಾಹಿತಿಗೆ: 94489 20888, 94814 22734

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT