<p><strong>ಬೆಂಗಳೂರು</strong>: ‘ಬಸವ ವೇದಿಕೆ ವತಿಯಿಂದ ಬಸವ ಜಯಂತಿ ಹಾಗೂ ‘ಬಸವಶ್ರೀ’, ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ 7ರಂದು ಬೆಳಿಗ್ಗೆ 10.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದುವೇದಿಕೆ ಅಧ್ಯಕ್ಷ ಸಿ.ಸೋಮಶೇಖರ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘2022ನೇ ಸಾಲಿನ ‘ಬಸವಶ್ರೀ’ ಪ್ರಶಸ್ತಿಗೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದ ಕುಲಾಧಿಪತಿ ಎಚ್.ಆರ್.ನಾಗೇಂದ್ರ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಬೀದರ್ ಜಿಲ್ಲೆಯ ಬಸವಗಿರಿಯ ಬಸವಸೇವಾ ಪ್ರತಿಷ್ಠಾನದವಚನಗಾರ್ತಿ ಗಂಗಾಂಬಿಕಾ ಅವರನ್ನು ಆಯ್ಕೆ ಮಾಡಲಾಗಿದೆ.ವಚನ ಸಾಹಿತ್ಯಶ್ರೀ ₹10 ಸಾವಿರ ನಗದು ಒಳಗೊಂಡಿದೆ’ ಎಂದರು.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಸತಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.</p>.<p>‘ಇದೇ ಕಾರ್ಯಕ್ರಮದಲ್ಲಿ ಬಸವ ಜ್ಯೋತಿ ಸಂಚಿಕೆ ಬಿಡುಗಡೆ ಮಾಡಲಾಗುವುದು. ಬೆಳಿಗ್ಗೆ 9.30ರಿಂದ ಗಾಯಕಿ ಸುಪ್ರಿಯಾ ರಘುನಂದನ್ ಅವರಿಂದ ವಚನ ಗಾಯನ ಇರಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಸವ ವೇದಿಕೆ ವತಿಯಿಂದ ಬಸವ ಜಯಂತಿ ಹಾಗೂ ‘ಬಸವಶ್ರೀ’, ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ 7ರಂದು ಬೆಳಿಗ್ಗೆ 10.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದುವೇದಿಕೆ ಅಧ್ಯಕ್ಷ ಸಿ.ಸೋಮಶೇಖರ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘2022ನೇ ಸಾಲಿನ ‘ಬಸವಶ್ರೀ’ ಪ್ರಶಸ್ತಿಗೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದ ಕುಲಾಧಿಪತಿ ಎಚ್.ಆರ್.ನಾಗೇಂದ್ರ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಬೀದರ್ ಜಿಲ್ಲೆಯ ಬಸವಗಿರಿಯ ಬಸವಸೇವಾ ಪ್ರತಿಷ್ಠಾನದವಚನಗಾರ್ತಿ ಗಂಗಾಂಬಿಕಾ ಅವರನ್ನು ಆಯ್ಕೆ ಮಾಡಲಾಗಿದೆ.ವಚನ ಸಾಹಿತ್ಯಶ್ರೀ ₹10 ಸಾವಿರ ನಗದು ಒಳಗೊಂಡಿದೆ’ ಎಂದರು.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಸತಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.</p>.<p>‘ಇದೇ ಕಾರ್ಯಕ್ರಮದಲ್ಲಿ ಬಸವ ಜ್ಯೋತಿ ಸಂಚಿಕೆ ಬಿಡುಗಡೆ ಮಾಡಲಾಗುವುದು. ಬೆಳಿಗ್ಗೆ 9.30ರಿಂದ ಗಾಯಕಿ ಸುಪ್ರಿಯಾ ರಘುನಂದನ್ ಅವರಿಂದ ವಚನ ಗಾಯನ ಇರಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>