ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘2022ನೇ ಸಾಲಿನ ‘ಬಸವಶ್ರೀ’ ಪ್ರಶಸ್ತಿಗೆ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದ ಕುಲಾಧಿಪತಿ ಎಚ್.ಆರ್.ನಾಗೇಂದ್ರ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಬೀದರ್ ಜಿಲ್ಲೆಯ ಬಸವಗಿರಿಯ ಬಸವಸೇವಾ ಪ್ರತಿಷ್ಠಾನದವಚನಗಾರ್ತಿ ಗಂಗಾಂಬಿಕಾ ಅವರನ್ನು ಆಯ್ಕೆ ಮಾಡಲಾಗಿದೆ.ವಚನ ಸಾಹಿತ್ಯಶ್ರೀ ₹10 ಸಾವಿರ ನಗದು ಒಳಗೊಂಡಿದೆ’ ಎಂದರು.