ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶುಕ್ರವಾರ ಕರ್ನಾಟಕ ಪ್ರತಿಭಾವರ್ಧಕ ಅಕಾಡೆಮಿ ಆಯೋಜಿಸಿದ್ದ ಬಸವೇಶ್ವರ ಜಯಂತಿ ಅಂಗವಾಗಿ ಬಿ.ಕೆ. ಸುಮಿತ್ರ ಅವರಿಗೆ ‘ಕಾಯಕ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಚನ ಗಾಯಕಿ ಅರುಣ ಚಂದ್ರಶೇಖರ್ ಯಶವಂತ ಜಸ್ಟಿಸ್ ಶಿವರಾಜ್ ಪಾಟೀಲ ಶೇಷಾದ್ರಿಪುರಂ ಎಜುಕೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ಶಾಂತ್ ಎ ತಿಮ್ಮಯ್ಯ ಉಪಸ್ಥಿತರಿದ್ದರು. –ಪ್ರಜಾವಾಣಿ ಚಿತ್ರ
ನೆಲಮಂಗಲ ಪವಾಡ ಬಸವಣ್ಣ ದೇವರಮಠದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ ಅವರು ಬಸವ ಜಯಂತಿ ಉದ್ಘಾಟಿಸಿದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಶಿವರಾಜ ಪಾಟೀಲ. ಸಾಹಿತಿ ಗೊ.ರು. ಚನ್ನಬಸಪ್ಪ ಶಾಸಕ ಶ್ರೀನಿವಾಸ್ ಪಾಲ್ಗೊಂಡಿದ್ದರು.
ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ವಚನ ಜ್ಯೋತಿ ಬಳಗ ಆಯೋಜಿಸಿದ್ದ ಬಸವ ಉತ್ಸವದ ಮೆರವಣಿಗೆಯು ಹೊಸಹಳ್ಳಿಯ ಜಗಜ್ಯೋತಿ ಬಸವೇಶ್ವರ ವಿದ್ಯಾರ್ಥಿನಿಲಯದ ಮುಂಭಾಗದಿಂದ ಹೊರಟು ವಿಜಯನಗರ ರಸ್ತೆಯಲ್ಲಿ ವಿಜೃಂಭಣೆಯಿಂದ ಸಾಗಿತು. -ಪ್ರಜಾವಾಣಿ ಚಿತ್ರ