‘12ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಜೀವಿಗಳ ಸಂಕಷ್ಟಕ್ಕೆ ಧ್ವನಿಯಾದರು. ವಿವಿಧ ಕಸುಬುಗಳನ್ನು ಮಾಡುತ್ತಿದ್ದ ಕಾಯಕ ಜೀವಿಗಳನ್ನು ಒಟ್ಟುಗೂಡಿಸಿದ್ದರು. ಅನುಭವ ಮಂಟಪದಲ್ಲಿ ಸಮಾನವಾಗಿ ಕುಳಿತುಕೊಂಡು ಅವರೊಂದಿಗೆ ಚರ್ಚಿಸುತ್ತಿದ್ದರು. ಬಸವಣ್ಣನವರು ಕಾಯಕಕ್ಕೆ ತಕ್ಕಂತೆ ಘನತೆ, ಶ್ರಮಿಕರಲ್ಲಿ ಆತ್ಮವಿಶ್ವಾಸ ತಂದುಕೊಟ್ಟವರು. ವಿಶ್ವದ ಮೊದಲ ಕಾರ್ಮಿಕ ದಿನಾಚರಣೆ 12ನೇ ಶತಮಾನದಲ್ಲಿ ನಡೆದ ವಚನ ಚಳವಳಿಯಾಗಿದೆ’ ಎಂದರು.