ಜಾತ್ರೆ, ಉತ್ಸವ, ಹಬ್ಬಗಳಿಂದ ಮನುಷ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಲು ಸಹಾಯವಾಗುತ್ತದೆ. ನಮ್ಮ ಪೂರ್ವಿಕರ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಜಾತ್ರೆ, ಉತ್ಸವಗಳನ್ನು ಯುವಜನಾಂಗಕ್ಕೆ ತಿಳಿಸುವುದಕ್ಕಾಗಿ ಕಡಲೆಕಾಯಿ ಪರಿಷೆ, ಸಂಕ್ರಾಂತಿ ಉತ್ಸವ, ಜಾತ್ರಾ ಮಹೋತ್ಸವ ನಡೆಸಿಕೊಂಡು ಬರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.