<p>ಬೆಂಗಳೂರು: ಬಸವೇಶ್ವರನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಬಳಿ ರಸ್ತೆ ಬದಿಯಲ್ಲೇ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮೃತದೇಹ ಸಾಗಿಸಲು ಆಂಬುಲೆನ್ಸ್ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕ್ರೀಡಾಂಗಣ ಪಕ್ಕದಿಂದ ರಾಜಾಜಿನಗರ ಕೈಗಾರಿಕಾ ಪ್ರದೇಶಕ್ಕೆ ಹೋಗಲು ರಸ್ತೆ ಇದೆ. ಅದರ ದ್ವಾರ ಬಾಗಿಲು ಬಳಿಯೇ ಗುರುವಾರ ಬೆಳಿಗ್ಗೆ ಮೃತದೇಹ ಕಂಡಿತ್ತು. ಅದನ್ನು ನೋಡಿದ್ದ ಸ್ಥಳೀಯರು, ಬಸವೇಶ್ವರನಗರ ಠಾಣೆಗೆ ಮಾಹಿತಿ ನೀಡಿದ್ದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಮೃತದೇಹದ ಮೇಲೆ ಕೆಂಪು ಬಟ್ಟೆ ಹೊದಿಸಿದ್ದರು. ಆಂಬುಲೆನ್ಸ್ಗೂ ಕರೆ ಮಾಡಿದ್ದರು. ನಾಲ್ಕು ಗಂಟೆಯಾದರೂ ಆಂಬುಲೆನ್ಸ್ ಬಂದಿರಲಿಲ್ಲ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸ್ಥಳೀಯರು, ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿ ದೂರು ನೀಡಿದ್ದರು. ಮಧ್ಯಾಹ್ನದ ನಂತರವೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.</p>.<p>‘ಬುಧವಾರ ರಾತ್ರಿಯೇ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿ, ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಸಾವಿಗೆ ಕೊರೊನಾ ಸೋಂಕು ಕಾರಣವಾ? ಅಥವಾ ಬೇರೆ ಏನಾದರೂ ಸಮಸ್ಯೆ ಇತ್ತಾ? ಎಂಬುದು ವೈದ್ಯರ ವರದಿಯಿಂದ ತಿಳಿಯಬೇಕಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಸವೇಶ್ವರನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಬಳಿ ರಸ್ತೆ ಬದಿಯಲ್ಲೇ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮೃತದೇಹ ಸಾಗಿಸಲು ಆಂಬುಲೆನ್ಸ್ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕ್ರೀಡಾಂಗಣ ಪಕ್ಕದಿಂದ ರಾಜಾಜಿನಗರ ಕೈಗಾರಿಕಾ ಪ್ರದೇಶಕ್ಕೆ ಹೋಗಲು ರಸ್ತೆ ಇದೆ. ಅದರ ದ್ವಾರ ಬಾಗಿಲು ಬಳಿಯೇ ಗುರುವಾರ ಬೆಳಿಗ್ಗೆ ಮೃತದೇಹ ಕಂಡಿತ್ತು. ಅದನ್ನು ನೋಡಿದ್ದ ಸ್ಥಳೀಯರು, ಬಸವೇಶ್ವರನಗರ ಠಾಣೆಗೆ ಮಾಹಿತಿ ನೀಡಿದ್ದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಮೃತದೇಹದ ಮೇಲೆ ಕೆಂಪು ಬಟ್ಟೆ ಹೊದಿಸಿದ್ದರು. ಆಂಬುಲೆನ್ಸ್ಗೂ ಕರೆ ಮಾಡಿದ್ದರು. ನಾಲ್ಕು ಗಂಟೆಯಾದರೂ ಆಂಬುಲೆನ್ಸ್ ಬಂದಿರಲಿಲ್ಲ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸ್ಥಳೀಯರು, ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿ ದೂರು ನೀಡಿದ್ದರು. ಮಧ್ಯಾಹ್ನದ ನಂತರವೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.</p>.<p>‘ಬುಧವಾರ ರಾತ್ರಿಯೇ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿ, ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಸಾವಿಗೆ ಕೊರೊನಾ ಸೋಂಕು ಕಾರಣವಾ? ಅಥವಾ ಬೇರೆ ಏನಾದರೂ ಸಮಸ್ಯೆ ಇತ್ತಾ? ಎಂಬುದು ವೈದ್ಯರ ವರದಿಯಿಂದ ತಿಳಿಯಬೇಕಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>