<p><strong>ಬೆಂಗಳೂರು</strong>: ಯಲಹಂಕ ಹೋಬಳಿಯಲ್ಲಿ ಕೋಗಿಲು ಪ್ರದೇಶದಲ್ಲಿ ಒತ್ತುವರಿಯಾಗಿದ್ದ ಐದೂವರೆ ಎಕರೆ ಜಾಗವನ್ನು ಬಿಬಿಎಂಪಿಯ ಅಧಿಕಾರಿಗಳು ಮತ್ತೆ ಸ್ವಾಧೀನಕ್ಕೆ ಪಡೆದಿದ್ದಾರೆ.</p>.<p>‘ಈ ಜಾಗವನ್ನು ಬಯೋಮೀಥೇನ್ ಘಟಕ ಸ್ಥಾಪನೆಗಾಗಿ ಕಾಯ್ದಿರಿಸಲಾಗಿತ್ತು. ಇಲ್ಲಿ ಯಾರೋ ಕಿಡಿಗೇಡಿಗಳು ಅನಧಿಕೃತವಾಗಿ ಬಡಾವಣೆ ನಿರ್ಮಿಸಲು ಮುಂದಾಗಿದ್ದರು. ತಾತ್ಕಾಲಿಕ ಕಟ್ಟಡವನ್ನೂ ನಿರ್ಮಿಸಿ ಆವರಣ ಗೋಡೆಯನ್ನೂ ಕಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ನಾವು ಆ ಕಟ್ಟಡ ಹಾಗೂ ಗೋಡೆಯನ್ನು ನೆಲಸಮ ಮಾಡಿದ್ದೇವೆ. ಜಾಗಕ್ಕೆ ಬೇಲಿ ಹಾಕಿ ಸ್ವಾಧೀನಕ್ಕೆ ಪಡೆದಿದ್ದೇವೆ. ಒತ್ತುವರಿದಾರರ ವಿರುದ್ಧ ಎಫ್ಐಆರ್ ದಾಖಲಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಬಿಬಿಎಂಪಿಯ ಜಂಟಿ ಆಯುಕ್ತ (ಕಸ ವಿಲೇವಾರಿ) ಸರ್ಫರಾಜ್ ಖಾನ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>‘ಇಲ್ಲಿ ₹ 10 ಕೋಟಿ ವೆಚ್ಚದಲ್ಲಿ ಬಯೊಮೀಥೇನ್ ಘಟಕವನ್ನು ನಿರ್ಮಿಸಲಾಗುತ್ತದೆ. ಈ ಘಟಕವು ನಿತ್ಯ 50 ಟನ್ ಕಸವನ್ನು ಬಳಸಿ ಅಡುಗೆ ಅನಿಲ ಉತ್ಪಾದಿಸಲಿದೆ. ಇದರ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎರಡು ವರ್ಷಗಳ ಒಳಗೆ ಘಟಕ ನಿರ್ಮಾಣವಾಗಲಿದೆ’ ಎಂದರು. ಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕ ಹೋಬಳಿಯಲ್ಲಿ ಕೋಗಿಲು ಪ್ರದೇಶದಲ್ಲಿ ಒತ್ತುವರಿಯಾಗಿದ್ದ ಐದೂವರೆ ಎಕರೆ ಜಾಗವನ್ನು ಬಿಬಿಎಂಪಿಯ ಅಧಿಕಾರಿಗಳು ಮತ್ತೆ ಸ್ವಾಧೀನಕ್ಕೆ ಪಡೆದಿದ್ದಾರೆ.</p>.<p>‘ಈ ಜಾಗವನ್ನು ಬಯೋಮೀಥೇನ್ ಘಟಕ ಸ್ಥಾಪನೆಗಾಗಿ ಕಾಯ್ದಿರಿಸಲಾಗಿತ್ತು. ಇಲ್ಲಿ ಯಾರೋ ಕಿಡಿಗೇಡಿಗಳು ಅನಧಿಕೃತವಾಗಿ ಬಡಾವಣೆ ನಿರ್ಮಿಸಲು ಮುಂದಾಗಿದ್ದರು. ತಾತ್ಕಾಲಿಕ ಕಟ್ಟಡವನ್ನೂ ನಿರ್ಮಿಸಿ ಆವರಣ ಗೋಡೆಯನ್ನೂ ಕಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ನಾವು ಆ ಕಟ್ಟಡ ಹಾಗೂ ಗೋಡೆಯನ್ನು ನೆಲಸಮ ಮಾಡಿದ್ದೇವೆ. ಜಾಗಕ್ಕೆ ಬೇಲಿ ಹಾಕಿ ಸ್ವಾಧೀನಕ್ಕೆ ಪಡೆದಿದ್ದೇವೆ. ಒತ್ತುವರಿದಾರರ ವಿರುದ್ಧ ಎಫ್ಐಆರ್ ದಾಖಲಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಬಿಬಿಎಂಪಿಯ ಜಂಟಿ ಆಯುಕ್ತ (ಕಸ ವಿಲೇವಾರಿ) ಸರ್ಫರಾಜ್ ಖಾನ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>‘ಇಲ್ಲಿ ₹ 10 ಕೋಟಿ ವೆಚ್ಚದಲ್ಲಿ ಬಯೊಮೀಥೇನ್ ಘಟಕವನ್ನು ನಿರ್ಮಿಸಲಾಗುತ್ತದೆ. ಈ ಘಟಕವು ನಿತ್ಯ 50 ಟನ್ ಕಸವನ್ನು ಬಳಸಿ ಅಡುಗೆ ಅನಿಲ ಉತ್ಪಾದಿಸಲಿದೆ. ಇದರ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎರಡು ವರ್ಷಗಳ ಒಳಗೆ ಘಟಕ ನಿರ್ಮಾಣವಾಗಲಿದೆ’ ಎಂದರು. ಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>