‘ಬಿಬಿಎಂಪಿ ಆಡಳಿತ ಸುಗಮವಾಗಲು 8 ವಲಯ ಮಾಡಲಾಗಿದೆ. ಯಾವುದೇ ಕೆಲಸ ವಿಳಂಬವಾಗಬಾರದು. ಒಂದು ವೇಳೆ ಕಾನೂನಾತ್ಮಕ ತೊಡಕು ಇದ್ದರೆ ಅದನ್ನು ಆಯುಕ್ತರ ಗಮನಕ್ಕೆ ತರಬೇಕು. ಈ ವಲಯದಲ್ಲಿ ಆಡಳಿತ ವೈಖರಿ ಇನ್ನಷ್ಟು ಚುರುಕುಗೊಳ್ಳಬೇಕು. ಮೂರು ವರ್ಷದಿಂದ ಸಾಕಷ್ಟು ಕಾಮಗಾರಿ ಬಾಕಿ ಇದೆ. ಕಾಲಮಿತಿಯೊಳಗೆ ಕಾಮಗಾರಿ ಮುಗಿಸಬೇಕು ಎಂದು ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.