<p><strong>ಬೆಂಗಳೂರು:</strong>ಮೈತ್ರಿ ಸರ್ಕಾರದಲ್ಲಿ ಬೆಂಗಳೂರಿಗೆ ಸಂಬಂಧಪಟ್ಟ ಹಾಗೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಬರುತ್ತಿದ್ದು, ಈ ಬಗ್ಗೆ ಚರ್ಚಿಸಲುಬೆಂಗಳೂರಿನ ಎರಡೂ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.</p>.<p>ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಉಪಹಾರಕೂಟದಲ್ಲಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರು, ವಿಧಾನಪರಿಷತ್ತಿನ ಸದಸ್ಯರು, ಮೇಯರ್ ಹಾಗೂ ಉಪಮೇಯರ್ ಪಾಲ್ಗೊಂಡಿದ್ದರು.</p>.<p>ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಎರಡೂ ಪಕ್ಷದ ಕಾರ್ಪೋರೇಟರ್ಗಳ ಜೊತೆ ಅನ್ಯೋನ್ಯತೆಯಿಂದ ಕೆಲಸ ಮಾಡುವಂತೆ ಎಲ್ಲ ಶಾಸಕರಿಗೆ ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಶಾಸಕರು, ಸಂಸದರು ಮೇಯರ್ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೆ’ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/state-politics-636229.html" target="_blank">ವಿಶ್ವನಾಥ್ ಹೇಳಿಕೆ, ಕಾಂಗ್ರೆಸ್ ಮುಖಂಡರ ಪ್ರತಿಕ್ರಿಯೆ; ಪರಮೇಶ್ವರ ಗರಂ</a></strong></p>.<p>ಬಿಬಿಎಂಪಿ ಬಜೆಟ್ ಸರ್ಕಾರದ ಮಟ್ಟದಲ್ಲಿ ಬಂದಿದೆ ಅದಕ್ಕೂ ಕೂಡ ಕೆಲವೇ ದಿನಗಳಲ್ಲಿ ಒಪ್ಪಿಗೆ ಸಿಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ಪತ್ರೆ , ಪಾರ್ಕ್, ಕ್ರೀಡಾ ಚಟುವಟಿಕೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಲು ಸದಸ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಹೊಸದಾಗಿ ನಾಲ್ಕು ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಲು ಅಭಿಪ್ರಾಯ ತಿಳಿಸಿದ್ದಾರೆ. ಈ ಎಲ್ಲಾ ಅಭಿಪ್ರಾಯವನ್ನು ಪರಿಗಣಿಸಿದ್ದೇವೆ’ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಮೈತ್ರಿ ಸರ್ಕಾರದಲ್ಲಿ ಬೆಂಗಳೂರಿಗೆ ಸಂಬಂಧಪಟ್ಟ ಹಾಗೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಬರುತ್ತಿದ್ದು, ಈ ಬಗ್ಗೆ ಚರ್ಚಿಸಲುಬೆಂಗಳೂರಿನ ಎರಡೂ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.</p>.<p>ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಉಪಹಾರಕೂಟದಲ್ಲಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರು, ವಿಧಾನಪರಿಷತ್ತಿನ ಸದಸ್ಯರು, ಮೇಯರ್ ಹಾಗೂ ಉಪಮೇಯರ್ ಪಾಲ್ಗೊಂಡಿದ್ದರು.</p>.<p>ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಎರಡೂ ಪಕ್ಷದ ಕಾರ್ಪೋರೇಟರ್ಗಳ ಜೊತೆ ಅನ್ಯೋನ್ಯತೆಯಿಂದ ಕೆಲಸ ಮಾಡುವಂತೆ ಎಲ್ಲ ಶಾಸಕರಿಗೆ ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಶಾಸಕರು, ಸಂಸದರು ಮೇಯರ್ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೆ’ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/state-politics-636229.html" target="_blank">ವಿಶ್ವನಾಥ್ ಹೇಳಿಕೆ, ಕಾಂಗ್ರೆಸ್ ಮುಖಂಡರ ಪ್ರತಿಕ್ರಿಯೆ; ಪರಮೇಶ್ವರ ಗರಂ</a></strong></p>.<p>ಬಿಬಿಎಂಪಿ ಬಜೆಟ್ ಸರ್ಕಾರದ ಮಟ್ಟದಲ್ಲಿ ಬಂದಿದೆ ಅದಕ್ಕೂ ಕೂಡ ಕೆಲವೇ ದಿನಗಳಲ್ಲಿ ಒಪ್ಪಿಗೆ ಸಿಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ಪತ್ರೆ , ಪಾರ್ಕ್, ಕ್ರೀಡಾ ಚಟುವಟಿಕೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಲು ಸದಸ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಹೊಸದಾಗಿ ನಾಲ್ಕು ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಲು ಅಭಿಪ್ರಾಯ ತಿಳಿಸಿದ್ದಾರೆ. ಈ ಎಲ್ಲಾ ಅಭಿಪ್ರಾಯವನ್ನು ಪರಿಗಣಿಸಿದ್ದೇವೆ’ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>