ಜೆಡಿಎಸ್ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರಾದ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಕೆ.ಶ್ರೀನಿವಾಸಗೌಡ, ಕೆ.ಎಂ.ಶಿವಲಿಂಗೇಗೌಡ ಹಾಗೂ ಇತರರು ನಿಯಮ 69ರಡಿ ಚರ್ಚೆಗೆ ಅವಕಾಶ ಕೋರಿದ್ದರು.ಈ ಸಂಬಂಧ ಪೂರಕ ಮಾಹಿತಿಗಳನ್ನು ನಿಗದಿತ ಸಮಯದೊಳಗೆ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಸೂಚಿಸಿತ್ತು. ಆದರೆ, ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲ. ಬಿಬಿಎಂಪಿ ಪ್ರಧಾನ ಮುಖ್ಯ ಎಂಜಿನಿಯರ್, ಎಲ್ಲ ವಲಯಗಳ ಮುಖ್ಯ ಎಂಜಿನಿಯರ್ ಹಾಗೂ ಮುಖ್ಯ ಎಂಜಿನಿಯರ್ಗಳ (ಕೆರೆ, ಯೋಜನೆ, ರಾಜಕಾಲುವೆ) ಧೋರಣೆಗೆ ನಗರಾಭಿವೃದ್ಧಿ ಇಲಾಖೆ ಅಸಮಾಧಾನ ವ್ಯಕ್ತಪಡಿಸಿತ್ತು.